ಕುಖ್ಯಾತ ರೌಡಿಶೀಟರ್ ಜೆಸಿಬಿ ನಾರಾಯಣನ ಹತ್ಯೆಗೆ ಯತ್ನ: ಆರೋಪಿಗಳ ಪತ್ತೆಗೆ ನಾಲ್ಕು ತಂಡ..!

Webdunia
ಗುರುವಾರ, 9 ಡಿಸೆಂಬರ್ 2021 (19:51 IST)
ಕ್ರಿಯೋ
ಬೆಂಗಳೂರು: ಕುಖ್ಯಾತ ರೌಡಿಶೀಟರ್ ಜೆಸಿಬಿ ನಾರಾಯಣನ ಹತ್ಯೆಗೆ ಯತ್ನಿಸಿ ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಕಾರ್ಯಾಚರಣೆ ಕೈಗೊಂಡಿದ್ದು, ಒಂದೊಂದು ತಂಡ ಪ್ರತ್ಯೇಕವಾಗಿ ಹಲವು ಮಾಹಿತಿಗಳನ್ನು ಕಲೆ ಹಾಕಿವೆ ಎಂಬ ಮಾಹಿತಿ ಹೊರಬಿದ್ದಿದ್ದೆ.
 
ಘಟನೆ ನಡೆದ ನಗರದ ಬೇಗೂರು ಕ್ಲಾಸಿಕ್ ಲೇಔಟ್  12ನೆ ಕ್ರಾಸ್‌ನ ಡಿಎಲ್ಎಫ್ ರಸ್ತೆಯಲ್ಲಿರುವ ಸಿಸಿಟಿವಿ ಹಾಗೂ ಅಕ್ಕಪಕ್ಕದ ರಸ್ತೆಯಲ್ಲಿನ ಸಿಸಿ ಕ್ಯಾಮರಾ ಪುಟೇಜ್‌ಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿ ಆರೋಪಿಗಳ ಮುಖಚಹರೆಯನ್ನು ತನಿಖಾ ತಂಡಗಳು ಪತ್ತೆಹಚ್ಚಿವೆ. ಆರೋಪಿಗಳು ಜೆಸಿಬಿ ನಾರಾಯಣನ ಎದುರಾಳಿ ಗುಂಪಿನವರೇ ಅಥವಾ ಹಳೆ ವೈಷಮ್ಯದಿಂದ ಪರಿಚಯಸ್ಥರೇ ಹತ್ಯೆಗೆ ಸಂಚು ರೂಪಿಸಿದ್ದರೆ ಎಂಬ ಬಗ್ಗೆಯೂ ತನಿಖಾ ತಂಡಗಳು ಮಾಹಿತಿ ಕಲೆಹಾಕುತ್ತಿವೆ ಎನ್ನಲಾಗುತ್ತಿದೆ. 
 
ಪ್ರಕರಣದ ಹಿನ್ನಲೆ: 
 
ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಏಕಾಏಕಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ರಾಜಾರೋಷವಾಗಿ ಆರೋಪಿಗಳು ರಸ್ತೆಯಲ್ಲಿ ಓಡಾಡಿಕೊಂಡು ಹತ್ಯೆಗೆ ಯತ್ನಿಸಿರುವುದು ಸಾರ್ವಜನಿಕರನ್ನು ಆತಂಕಕ್ಕೀಡುಮಾಡಿತ್ತು. ಡಿಸೆಂಬರ್ 1ರಂದು ಬೆಳಗ್ಗೆ ಹುಳಿಮಾವು ಠಾಣೆ ರೌಡಿಶೀಟರ್ ಜೆಸಿಬಿ ನಾರಾಯಣ ತಮ್ಮ ಕಾರಿನಲ್ಲಿ ಹೋಗುತ್ತಿದ್ದಾಗ ಹುಳಿಮಾವು ಡಿ.ಎಲ್‌.ಎಫ್ ರಸ್ತೆಯಲ್ಲಿ ಹೊಂಚು ಹಾಕಿದ್ದ ನಾಲೈದು ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಏಕಾಏಕಿ ನಾರಾಯಣನ ಕಾಲಿನ  ಬಳಿ ದೌಡಾಯಿಸಿ ಹಲ್ಲೆ ನೆಡೆಸಲು ಯತ್ನಿಸಿದ್ದರು.
 
ಅಡ್ಡಗಟ್ಟಿ ನೆಡೆಸಿದ ದಾಳಿಯ ತೀವ್ರತೆಗೆ ನಾರಾಯಣ ತಕ್ಷಣ ಕಾರನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ದುಷ್ಕರ್ಮಿಗಳು ಕೈಯಲ್ಲಿ ಮಾರಕಾಸ್ತ್ರ ಹಿಡಿದು ದೂರ ಬೆನ್ನಟ್ಟಿದ್ದರು. ಆದರೆ ನಾರಾಯಣ ಕೂದಲೆಳ ಅಂತರದಲ್ಲಿ ಅತಿ ವೇಗವಾಗಿ ಕಾರನ್ನು ರಿವರ್ಸ್ ಆಗಲು ಬೇರೆರಸ್ತೆಯಲ್ಲಿ ಕ್ಷಣಾರ್ಧದಲ್ಲಿ ಎಸ್ಟೇಪ್ ಆಗಿ ಪ್ರಾಣ ಉಳಿಸಿಕೊಂಡಿದ್ದನು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. 
 
ಘಟನೆಯ ಬಗ್ಗೆ ನಾರಾಯಣ ತಡವಾಗಿ ಬೇಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿಗಳ ಪತ್ತೆಗಾಗಿ ರಚಿಸಲಾದ ನಾಲ್ಕು ತಂಡಗಳು ಆರೋಪಿಗಳ ಬಂಧನಕ್ಕೆ ಬಲೆ ಬೀಸಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments