Webdunia - Bharat's app for daily news and videos

Install App

ಪ್ರಣಯಕ್ಕೆ ಒಪ್ಪದ ವಿದ್ಯಾರ್ಥಿನಿ ಕೊಲೆ: ಶಿಕ್ಷಕ ಬಂಧನ

Webdunia
ಬುಧವಾರ, 1 ನವೆಂಬರ್ 2023 (19:34 IST)
ಮುಂಬೈ : ಮೃತ ವೈಶಾಲಿಗೆ ಈಗಾಗಲೇ ಮದುವೆಯಾಗಿದ್ದು, ಆಕೆಗೆ ಆರು ತಿಂಗಳ ಮಗು ಕೂಡ ಇತ್ತು. ತನ್ನ ಶಿಕ್ಷಣವನ್ನು ಮುಂದುವರಿಸಲು ಇಚ್ಚಿಸಿದ ವೈಶಾಲಿ ಸಾಂಗ್ಲಿಯಲ್ಲಿರುವ ಯಶ್ವಂತ್ರಾವ್ ಚವಾಣ್ ಮುಕ್ತ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಅಲ್ಲಿ ಶಿಕ್ಷಕನಾಗಿದ್ದ ರಿಷಿಕೇಶ್ ಮೋಹನ್ ಕುಡಲ್ಕರ್ ವೈಶಾಲಿಗೆ ತನ್ನ ಜೊತೆ ಸೆಕ್ಸ್ ಮಾಡುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ವೈಶಾಲಿ ಒಪ್ಪದಿದ್ದಾಗ ಕೋಪಗೊಂಡ  ಶಿಕ್ಷಕ ಆಕೆಯನ್ನು ಕೊಲೆ ಮಾಡಿದ್ದಾನೆ.
 
ಸೆಕ್ಸ್ ಗೆ ನಿರಾಕರಿಸಿದ್ದಕ್ಕೆ ಕಾಲೇಜ್ ಶಿಕ್ಷಕನೊಬ್ಬ  ವಿವಾಹಿತ ವಿದ್ಯಾರ್ಥಿನಿಯನ್ನು ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ.
 
ವೈಶಾಲಿ ಮುಲಿಕ್ (21) ಕೊಲೆಯಾದ ವಿದ್ಯಾರ್ಥಿನಿ. ರಿಷಿಕೇಶ್ ಮೋಹನ್ ಕುಡಲ್ಕರ್ (27)ಕೊಲೆ ಮಾಡಿದ ಆರೋಪಿಯಾಗಿದ್ದು, ಈತ ಯಶ್ವಂತ್ರಾವ್ ಚವಾಣ್ ಮುಕ್ತ ವಿವಿಯಲ್ಲಿ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದನು. ಮೃತ ವೈಶಾಲಿ ಮತ್ತು ಶಿಕ್ಷಕ ಒಂದೇ ಗ್ರಾಮದವರಾಗಿದ್ದು ಪರಸ್ಪರ ಇಬ್ಬರಿಗೂ ಪರಿಚಯ ವಿತ್ತು. ಇಬ್ಬರ ಮಧ್ಯೆ ಸಂಬಂಧ ಕೂಡ ಇತ್ತು ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ವೇಳೆ ಇದು ಕೊಲೆ ಎನ್ನುವ ಫಲಿತಾಂಶ ಬಂದಿದ್ದ ಕಾರಣ  ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ ಕಾಲೇಜಿನ ಸಿಸಿಟಿವಿಯ ದೃಶ್ಯವನ್ನು ಪರಿಶೀಲಿಸಿ ಆರೋಪಿ ರಿಷಿಕೇಶ್ ಮೋಹನ್ ಕುಡಲ್ಕರ್ ಎಂಬುದನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments