Publish Date: Fri, 16 Sep 2022 (17:27 IST)
Updated Date: Fri, 16 Sep 2022 (18:30 IST)
ಶ್ರೀಮಠದ ಹಾಸ್ಟೆಲ್ನಲ್ಲಿದ್ದ ವಿದ್ಯಾರ್ಥಿನಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪವನ್ನು ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾಶರಣರ ಜಾಮೀನು ಅರ್ಜಿ ವಿಚಾರಣೆಯು ಶನಿವಾರಕ್ಕೆ (ಸೆ.೧೭) ಮುಂದೂಡಿಕೆಯಾಗಿದೆ.
ಚಿತ್ರದುರ್ಗ ಮುರುಘಾಶ್ರೀ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಚಿತ್ರದುರ್ಗ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆಯು ಶುಕ್ರವಾರ ಇತ್ತು. ಈ ವೇಳೆ ಈ ಪ್ರಕರಣದ ವಿಚಾರಣೆಯನ್ನು ಸೆ.೧೭ರ ಶನಿವಾರಕ್ಕೆ ಮುಂದೂಡಿ ನ್ಯಾಯಾಲಯ ಆದೇಶಿಸಿದೆ.