Select Your Language

Notifications

webdunia
webdunia
webdunia
webdunia

ಮುರುಘಾ ಶ್ರೀ: ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಮುರುಘಾ ಶ್ರೀ: ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಚಿತ್ರದುರ್ಗ , ಗುರುವಾರ, 1 ಸೆಪ್ಟಂಬರ್ 2022 (14:13 IST)
ಚಿತ್ರದುರ್ಗ : ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮುರುಘಾ ಶ್ರೀಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯ ಶುಕ್ರವಾರಕ್ಕೆ ಮುಂದೂಡಿದೆ.

ನಾಳೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದೆ. ಈ ಸಂಬಂಧ ಸರ್ಕಾರಿ ಅಭಿಯೋಜಕರಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಆ.30ರಂದು ಅರ್ಜಿ ಸಲ್ಲಿಸಲಾಗಿತ್ತು. 

ಕೋರ್ಟ್ ವಿಚಾರಣೆ ಕುರಿತು ಮಾತನಾಡಿದ ಬಾಲಕಿಯರ ಪರ ವಕೀಲ ಶ್ರೀನಿವಾಸ್, ಮುರುಘಾ ಶರಣರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಲಾಗಿದೆ. ನಾಳೆ ಸಂತ್ರಸ್ತ ಬಾಲಕಿಯರ ಪರ ತಕರಾರು ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪದವಿ ಪರೀಕ್ಷೆ ಮುಂದೂಡಲು ಆಗ್ರಹ