Webdunia - Bharat's app for daily news and videos

Install App

ಮುರುಘಾಮಠ ಭೂಮಿ ಖರೀದಿ: ಸಿಬಿಐ ತನಿಖೆಗೆ ಅಬ್ರಹಾಂ ಒತ್ತಾಯ

Webdunia
ಮಂಗಳವಾರ, 16 ಸೆಪ್ಟಂಬರ್ 2014 (12:21 IST)
ಮುರುಘಾಮಠದ ಭೂಮಿ ಖರೀದಿಯಲ್ಲಿ ಆಗಿನ ಮುಖ್ಯಮಂತ್ರಿಯಾಗಿದ್ದ ಜಗದೀಶ್ ಶೆಟ್ಟರ್  ಮಠಕ್ಕೆ ಅನುಕೂಲ ಮಾಡಿದ್ದಾರೆ ಎಂದು ಆರೋಪಿಸಿರುವ ಸಾಮಾಜಿಕ ಕಾರ್ಯಕರ್ತ  ಟಿ.ಜೆ. ಅಬ್ರಹಾಂ ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಅಬ್ರಹಾಂ ಪ್ರಕರಣದಲ್ಲಿ ಜಗದೀಶ್ ಶೆಟ್ಟರ್  ತಪ್ಪು ಸಾಬೀತಾಗಿದ್ದು, ಕಾನೂನುಬಾಹಿರವಾಗಿ ಹಣ ನೀಡಿದ್ದಾರೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು. 

ಹಣವನ್ನು ರಿಲೀಸ್ ಮಾಡುವುದಕ್ಕೆ ಮುಂಚೆ ಜಗದೀಶ್ ಶೆಟ್ಟರ್ ಮತ್ತು ಸಚಿವ ನಿರಾಣಿ ಅವರ ಗಮನಕ್ಕೆ ತಂದಿದ್ದರೂ ಭೂಮಿಯನ್ನು ಖರೀದಿ ಮಾಡಲಾಗಿದೆ. ಸರ್ಕಾರಕ್ಕೆ ಹೊರೆಯಾಗುವಂತೆ ಹಣ ಪಾವತಿ ಮಾಡಿದ್ದಾರೆ.  ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ  34.36 ಕೋಟಿಸಾಲ ಪಾವತಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಲಿ.

ಯಾವ ಆಧಾರದ ಮೇಲೆ ಅಷ್ಟೊಂದು ಹಣ ನೀಡಿದ್ದಾರೆಂದು ಸ್ಪಷ್ಟಪಡಿಸಲಿ ಎಂದು ಅಬ್ರಹಾಂ ಹೇಳಿದ್ದಾರೆ. ಸಿಎಂ ಅವರನ್ನೂ ಸೇರಿಸಿಕೊಂಡು ಲೋಕಾಯುಕ್ತಕ್ಕೆ ದೂರು ನೀಡುವೆ ಎಂದು ಅಬ್ರಹಾಂ ಹೇಳಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments