ಕಾಲೇಜ್ಗಳಲ್ಲಿ ಸಮವಸ್ತ್ರ ನೀತಿ ಸಂಹಿತೆ ಇಲ್ಲ. ಕೆಲ ಕಾಲೇಜ್ಗಳಲ್ಲಿ ಬುರ್ಖಾ ಹಾಕಿಕೊಂಡು ಬರದಂತೆ ವಿದ್ಯಾರ್ಥಿನಿಯರಿಗೆ ತೊಂದರೆ ಕೊಡಲಾಗುತ್ತಿದೆ. ತೊಂದರೆ ಕೊಡುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾಲೇಜಿನಲ್ಲಿ ವಸ್ತ್ರ ಸಂಹಿತೆ ಇಲ್ಲ. ಸ್ಥಳೀಯವಾಗಿ ಕಾಲೇಜ್ ಆಡಳಿತ ಮಂಡಳಿ ಡ್ರೆಸ್ ಕೋಡ್ ಮಾಡಿರುತ್ತೆ. ಕೆಲ ಕಾಲೇಜುಗಳಲ್ಲಿ ಮುಸ್ಲಿಂ ಯುವತಿಯರಿಗೆ ಬುರ್ಖಾ ಹಾಕಿಕೊಂಡು ಬರಬೇಡಿ ಎಂದು ತಾಕೀತು ಮಾಡುತ್ತಿರುವ ಕುರಿತು ನನ್ನ ಗಮನಕ್ಕೆ ಬಂದಿದೆ. ವಿನಾಕಾರಣ ವಿದ್ಯಾರ್ಥಿನಿಯರಿಗೆ ತೊಂದರೆ ಕೊಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಕಾಲೇಜ್ಗಳಿಗೆ ಬುರ್ಖಾ ಹಾಕಿಕೊಂಡು ಬರುವ ಮುಸ್ಲಿಂ ವಿದ್ಯಾರ್ಥಿನಿಯರರಿಗೆ ಸಂಪೂರ್ಣ ರಕ್ಷಣೆ ನೀಡಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.
ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಖಾ ಧರಿಸಿಕೊಂಡು ಕಾಲೇಜಿಗೆ ಬರುವ ವಿಷಯದಲ್ಲಿ ಕೆಲವು ಕೋಮುವಾದಿಗಳು ರಾಜಕೀಯ ಮಾಡುತ್ತಿದ್ದಾರೆ. ಧರ್ಮದ ಹೆಸರಿನಲ್ಲಿ ಉಡುಪಿನ ವಿಷಯ ಇಟ್ಟುಕೊಂಡು ರಾಜಕೀಯ ಮಾಡುವುದು ಸರಿಯಲ್ಲ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ