ಬಿಜೆಪಿಗೆ ಮತ ಹಾಕಿದ ಮುಸ್ಲಿಮರು ನಮ್ಮ ಧರ್ಮದವರೇ ಅಲ್ಲ ಎಂದ ಸಚಿವ ಜಮೀರ್ ಅಹ್ಮದ್

Webdunia
ಸೋಮವಾರ, 4 ಫೆಬ್ರವರಿ 2019 (11:39 IST)
ಬೆಂಗಳೂರು : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮರು ಬಿಜೆಪಿಗೆ ಮತ ಹಾಕಿದರೆ ಅಂಥವರು ನಮ್ಮ ಧರ್ಮದವರೇ ಅಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಅಖಿಲ ಭಾರತ ಜಮಿಯತ್ ಉಲ್ ಮನ್ಸೂರ್ ಸಂಘಟನೆಯ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿದ ಅವರು ಜನರನ್ನುದ್ದೇಶಿಸಿ ಮಾತನಾಡುವಾಗ ಈ ಹೇಳಿಕೆಯನ್ನು ನೀಡಿದ್ದಾರೆ. ‘ಲೋಕಸಭೆ ಚುನಾವಣೆಯಲ್ಲಿ ಮೋದಿಯನ್ನು ಸೋಲಿಸಲು ಜಾತ್ಯತೀತ ಪಕ್ಷಗಳು ಒಟ್ಟಾಗಿ ಹೋರಾಟ ಮಾಡಲಿವೆ. ಇದಕ್ಕೆ ಮುಸ್ಲಿಮರು ಬೆಂಬಲ ನೀಡಬೇಕು. ಮತ್ತೆ ಮೋದಿ ಪ್ರಧಾನಿಯಾದರೆ ಜಾತ್ಯತೀತ ಪಕ್ಷಗಳು ಹಾಗೂ ಅಲ್ಪಸಂಖ್ಯಾತರಿಗೆ ಉಳಿಗಾಲವಿಲ್ಲ’ ಎಂದು ಹೇಳಿದ್ದಾರೆ.


ಹಾಗೇ ‘ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ರಲ್ಲಿ ಮುಸ್ಲಿಂ ಮತದಾರರ ಸಂಖ್ಯೆ 2 ರಿಂದ 5 ಲಕ್ಷದಷ್ಟಿದೆ. ಎಲ್ಲರೂ ಒಂದೇ ಪಕ್ಷಕ್ಕೆ ಶೇ. 100 ರಷ್ಟು ಮತಹಾಕಿದರೆ ಕಾಂಗ್ರೆಸ್ 20 ಸೀಟು ಗೆಲ್ಲುವುದು ಕಷ್ಟವಲ್ಲ. ಈ ಅಂಶಗಳನ್ನು ಗಮನಿಸಿ ಬಿಜೆಪಿ ಸೋಲಿಸಲು ಮುಸ್ಲಿಮರು ಒಗ್ಗಟ್ಟು ಪ್ರದರ್ಶಿಸಬೇಕಿದೆ’ ಎಂದು ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನೆಯಲ್ಲಿ ಮೇಲ್ಜಾತಿಯವರದ್ದೇ ಕಂಟ್ರೋಲ್ ಎಂದ ರಾಹುಲ್ ಗಾಂಧಿ: ಸೇನೆಯಲ್ಲೂ ಜಾತಿ ಹುಡುಕ್ತಿದ್ದಾರೆ ಎಂದ ಬಿಜೆಪಿ

Karnataka Weather: ಇಂದೂ ಇದೆ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಮುಂದಿನ ಸುದ್ದಿ
Show comments