Select Your Language

Notifications

webdunia
webdunia
webdunia
webdunia

ಮುಸ್ಲಿಂ, ಕ್ರಿಶ್ಚಿಯನ್ನರು ದೇಶಭಕ್ತರಲ್ಲವಾದ್ದರಿಂದ ಟಿಕೆಟ್ ಕೊಡಲ್ಲ: ಕೆ.ಎಸ್.ಈಶ್ವರಪ್ಪ

ಮುಸ್ಲಿಂ, ಕ್ರಿಶ್ಚಿಯನ್ನರು ದೇಶಭಕ್ತರಲ್ಲವಾದ್ದರಿಂದ ಟಿಕೆಟ್ ಕೊಡಲ್ಲ: ಕೆ.ಎಸ್.ಈಶ್ವರಪ್ಪ
ಬಾಗಲಕೋಟೆ , ಸೋಮವಾರ, 15 ಏಪ್ರಿಲ್ 2019 (19:26 IST)
ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ದೇಶಕ್ಕೆ ನಿಷ್ಠರಾಗಿಲ್ಲವಾದ್ದರಿಂದ ಬಿಜೆಪಿ ಪಕ್ಷದ ಹೈಕಮಾಂಡ್ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಿಲ್ಲ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ನಿಷ್ಠರಾಗಿದ್ದವರಿಗೆ ಮಾತ್ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಟಿಕೆಟ್ ನೀಡುತ್ತದೆ. ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ದೇಶಕ್ಕೆ ನಿಷ್ಠರಾಗಿಲ್ಲವಾದ್ದರಿಂದ ಟಿಕೆಟ್ ನಿರಾಕರಿಸಲಾಗಿದೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.
 
ಒಂದು ವೇಳೆ ದೇಶಕ್ಕೆ ನಿಷ್ಠರಾಗಿರದ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದಲ್ಲಿ ದೇಶದ ಗತಿಯೇನು? ಆದ್ದರಿಂದ ಬಿಜೆಪಿ ಹೈಕಮಾಂಡ್ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿಲ್ಲ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಮತ್ತೆ ಕಣ್ಣೀರು ಹಾಕಿದ್ದು ಏಕೆ?