Webdunia - Bharat's app for daily news and videos

Install App

ಕಾಶಿ ವಿಶ್ವನಾಥ ಧಾಮಕ್ಕೆ ಮುಸ್ಲಿಮರಿಂದ ಭೂದಾನ, ಮಸೀದಿ ಪಕ್ಕದ ಜಾಗ ಮಂದಿರಕ್ಕೆ!

Webdunia
ಭಾನುವಾರ, 25 ಜುಲೈ 2021 (17:27 IST)
ವಾರಾಣಸಿ(ಜು.25): ಕಾಶಿ ವಿಶ್ವನಾಥ ದೇವಾಲಯ ಧಾಮ ನಿರ್ಮಾಣಕ್ಕಾಗಿ ಗ್ಯಾನ್ವಾಪಿ ಮಸೀದಿಯ ಪಕ್ಕದ 1700 ಚರದ ಅಡಿಯ ಜಾಗವನ್ನು ಬಿಟ್ಟುಕೊಡಲು ಮುಸ್ಲಿಂ ಸಮುದಾಯ ಒಪ್ಪಿಗೆ ಸೂಚಿಸಿದೆ. ಈ ಜಾಗಕ್ಕೆ ಬದಲಾಗಿ ಇನ್ನೊಂದು ಕಡೆಯಲ್ಲಿ ಮುಸ್ಲಿಮರಿಗೆ ಕಾಶಿ ವಿಶ್ವನಾಥ ದೇವಾಲಯ ಟ್ರಸ್ಟ್ 1000 ಚದರ ಕಿ.ಮೀ.ಜಾಗವನ್ನು ನೀಡಲಿದೆ.

* ಇದಕ್ಕೆ ಪ್ರತಿಯಾಗಿ ಮುಸ್ಲಿಮರಿಗೆ ಬೇರೆ ಕಡೆ ಜಮೀನು
* ಕಾಶಿ ವಿಶ್ವನಾಥ ಧಾಮಕ್ಕೆ ಮುಸ್ಲಿಮರಿಂದ ಜಮೀನು ದೇಣಿಗೆ
* ಮಸೀದಿ ಪಕ್ಕದ 1700 ಚದರ ಅಡಿ ಜಾಗ ತೆರವು

 ಇದರಿಂದಾಗಿ ಕಾಶಿ ದೇವಾಲಯ ಕಾರಿಡಾರ್ ನಿರ್ಮಾಣಕ್ಕೆ ಇದ್ದ ಅಡೆತಡೆಗಳು ನಿವಾರಣೆ ಆಗಿವೆ.
ಈ ಯೋಜನೆ ಪೂರ್ಣಗೊಂಡ ಬಳಿಕ ಕಾಶಿ ವಿಶ್ವನಾಥ ದೇವಾಲಯ ಪ್ರಮುಖ ಪ್ರವಾಸಿ ಕೇಂದ್ರ ಎನಿಸಿಕೊಳ್ಳಲಿದೆ. ಕಾಶಿ ವಿಶ್ವನಾಥ ದೇವಾಲಯದಿಂದ ಮಣಿಕರ್ಣಿಕಾ, ಜಲಸೇನ್ ಮತ್ತು ಲಲಿತಾ ಘಾಟ್ಗಳಿಗೆ ನೇರ ಸಂಪರ್ಕ ಸಾಧ್ಯವಾಗಲಿದೆ. ಅಲ್ಲದೇ ಕಾಶಿ ವಿಶ್ವನಾಥ ದೇವಾಲಯದಿಂದಲೇ ಗಂಗಾ ಆರತಿಯನ್ನು ವೀಕ್ಷಿಸಬಹುದಾಗಿದೆ.
ಕಾಶಿ ವಿಶ್ವನಾಥ ದೇವಾಲಯದ ಸುತ್ತಮುತ್ತ ಅನೇಕ ಕಟ್ಟಡಗಳು ಕಾರಿಡಾರ್ ನಿರ್ಮಾಣಕ್ಕೆ ಅಡ್ಡಿ ಆಗಿದ್ದವು. ಕಾರಿಡಾರ್ ನಿರ್ಮಾಣಕ್ಕೆ ತೆರವುಗೊಳಿಸಬೇಕಾದ 166 ಕಟ್ಟಡಗಳನ್ನು ಗುರುತಿಸಲಾಗಿದೆ. ಇದರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಜಾಗವೂ ಸೇರಿತ್ತು. ಈ ನಿಟ್ಟಿನಲ್ಲಿ ಕಾಶಿ ವಿಶ್ವನಾಥ ದೇವಾಲಯ ಮುಸ್ಲಿಂ ಸಮುದಾಯದ ಜೊತೆ ಮಾತುಕತೆ ನಡೆಸಿ ಜು.9ರಂದು ಜಮೀನನ್ನು ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಒಪ್ಪಂದವನ್ನು ಅಂತಿಮಗೊಳಿಸಿತ್ತು. ಈ ಬಗ್ಗೆ ಈ ಅಧಿಕೃತ ಪ್ರಕಟಣೆ ಹೊರಬಿದ್ದಿದೆ.
ಇದೇ ವೇಳೆ ಮಸೀದಿ ಹಾಗೂ ವಿಶ್ವನಾಥ ದೇವಾಲಯದ ಸಂಪೂರ್ಣ ಆವರಣಕ್ಕೆ ಸಂಬಂಧಿಸಿದಂತೆ ಪುರಾತತ್ವ ಇಲಾಖೆ ಕೈಗೊಂಡ ಸರ್ವೇ ವಿವಾದ ಇನ್ನೂ ಕೊನೆಗೊಂಡಿಲ್ಲ. ಈ ವಿಷಯಾಗಿ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments