Select Your Language

Notifications

webdunia
webdunia
webdunia
webdunia

ನ್ಯೂ ಇಯರ್ ಸೆಲೆಬ್ರೇಷನ್ ಗೆ ಅಪ್ಪಿ ತಪ್ಪಿ ಮುತ್ತತ್ತಿಗೆ ಬರಬೇಡಿ!

ನ್ಯೂ ಇಯರ್ ಸೆಲೆಬ್ರೇಷನ್ ಗೆ ಅಪ್ಪಿ ತಪ್ಪಿ ಮುತ್ತತ್ತಿಗೆ ಬರಬೇಡಿ!
ಮಂಡ್ಯ , ಶನಿವಾರ, 29 ಡಿಸೆಂಬರ್ 2018 (17:50 IST)
ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಮುತ್ತತ್ತಿಗೆ ಪ್ರವಾಸಿಗರ ಪ್ರವೇಶ ನಿಷೇಧ ಮಾಡಲಾಗಿದೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಮುತ್ತತ್ತಿಗೆ ಪ್ರವೇಶ ನಿಷೇಧ ಮಾಡಲಾಗಿದೆ.

ಮುತ್ತತ್ತಿಗೆ 2 ದಿನಗಳ ಕಾಲ ಸಾರ್ವಜನಿಕರ ಪ್ರವೇಶ ನಿಷೇಧ ಮಾಡಲಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ತಾಣ ಮುತ್ತತ್ತಿ ಪ್ರಸಿದ್ಧ ಯಾತ್ರಾ, ಪ್ರವಾಸಿ ತಾಣವಾಗಿದೆ. ಮುತ್ತತ್ತಿ ಆಸು ಪಾಸು, ನದಿ ಅಂಚಿನಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿದೆ.

ಡಿಸೆಂಬರ್ 31ರ ಬೆಳಿಗ್ಗೆ 6ಗಂಟೆಯಿಂದ ಜನವರಿ 1ರ ಮಧ್ಯರಾತ್ರಿವರೆಗೆ ಸೆಕ್ಷನ್ 144 ಜಾರಿ ಮಾಡಿ, ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಾಜ್ಞೆ ಜಾರಿಗೊಳಿಸಿ ಮಳವಳ್ಳಿ ತಹಸೀಲ್ದಾರ್ ಕೆ.ಚಂದ್ರಮೌಳಿಯಿಂದ ಆದೇಶ ಮಾಡಲಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಗಬ್ಬು ದುರ್ನಾತ: ಸಂಸ್ಕರಣಾ ಘಟಕ ಮುಚ್ಚಲೇಬೇಕೆಂತೆ