ನನ್ನ ಕುಟುಂಬಕ್ಕೆ ಉಚಿತ ಯೋಜನೆ ಬೇಡ, ಬಡವರಿಗೆ ಸಿಗಲಿ : ರೇಣುಕಾಚಾರ್ಯ

Webdunia
ಗುರುವಾರ, 8 ಜೂನ್ 2023 (13:26 IST)
ದಾವಣಗೆರೆ : ನನ್ನ ಕುಟುಂಬಕ್ಕೆ ಉಚಿತ ಯೋಜನೆ ಬೇಡ, ಬಡವರಿಗೆ ಸಿಗಲಿ ಎಂದು ಹೊನ್ನಾಳಿಯ ಬಿಜೆಪಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಂಡೀಷನ್ ಹಾಕದೇ ಗ್ಯಾರಂಟಿ ಯೋಜನೆ ಜಾರಿ ಮಾಡಿ. ಚುನಾವಣೆಯಲ್ಲಿ ಗೆಲುವು ಸಾಧಿಸಲು ಜನರ ಕಿವಿಗೆ ಹೂವು ಇಡುವುದು ಸರಿಯಲ್ಲ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಭರವಸೆಯನ್ನಾಗಿ ನೀಡಿ ಜನರನ್ನು ಮರಳು ಮಾಡಿದ್ದಾರೆ.

ಈಗ ಎಲ್ಲದಕ್ಕೂ ಷರತ್ತು ವಿಧಿಸುವುದು ಸರಿಯಲ್ಲ. ಚುನಾವಣೆಗೆ ಮುಂಚೆ ಷರತ್ತು ಹೇಳದೇ ಗ್ಯಾರಂಟಿ ಘೋಷಣೆ ಮಾಡಿದ್ದೀರಿ. ಈಗಲೂ ಕೂಡ ಯಾವುದೇ ಶರತ್ತು ಹಾಕದೇ ಯೋಜನೆ ಜಾರಿ ಮಾಡಿ ಎಂದು ಆಗ್ರಹಿಸಿದರು. 

ಕರೆಂಟ್ ಬಿಲ್, ಅನ್ನಭಾಗ್ಯ, ಬಸ್ ಪ್ರಯಾಣ ಎಲ್ಲದಕ್ಕೂ ಷರತ್ತು ಹಾಕುತ್ತಿದ್ದೀರಿ. ಕೊಟ್ಟು ಮಾತು ಉಳಿಸಿಕೊಳ್ಳಿ. ವಚನ ಭ್ರಷ್ಟರಾಗಬೇಡಿ. ಕೇಂದ್ರ ಸರ್ಕಾರ ಈಗ 5 ಕೆಜಿ ಅಕ್ಕಿ ಕೊಡುತ್ತಿದೆ. ಅದನ್ನ ಬಿಟ್ಟು ನೀವು 10 ಕೆಜಿ ಕೊಡಿ. ಗೃಹ ಲಕ್ಷ್ಮಿ ಯೋಜನೆ ಕೊಟ್ಟು ಅತ್ತೆ ಸೊಸೆಗೆ ಜಗಳ ತಂದಿಟ್ಟಿದ್ದೀರಿ. ಈಗಾಗಲೇ ಮನೆಗಳಲ್ಲಿ ಅತ್ತೆ-ಸೊಸೆ ಗಲಾಟೆ ಶುರುವಾಗಿದೆ. ಬಾಡಿಗೆ ಇದ್ದ ಮನೆಗೂ ಯಾವುದೇ ಷರತ್ತು ಇಲ್ಲದೆ ಕರೆಂಟ್ ಫ್ರೀ ಕೊಡಿ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments