ನನ್ನ ಮನೆ ಹೈದರಾಬಾದ್‌ನಲ್ಲಿದೆ, ಕರ್ನಾಟಕ ಎಲ್ಲಿದೆ: ರಶ್ಮಿಕಾ ನಡೆಗೆ ಶಾಸಕ ರವಿಕುಮಾರ್‌ ಆಕ್ರೋಶ

Sampriya
ಸೋಮವಾರ, 3 ಮಾರ್ಚ್ 2025 (19:22 IST)
Photo Courtesy X
ಬೆಂಗಳೂರು: ಕನ್ನಡ ಸಿನಿಮಾ ಮೂಲಕ ಗುರುತಿಸಿಕೊಂಡಿವ ನಟಿ ರಶ್ಮಿಕಾ ಮಂದಣ್ಣ ಅವರು  ಕನ್ನಡವನ್ನು ಕಡೆಗಣಿಸಿದ್ದಾರೆಂದು ನ್ಯಾಶನಲ್ ಕ್ರಶ್ ಮೇಲೆ ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಗಾಣಿಗ ಆಕ್ರೋಶ ಹೊರಹಾಕಿದ್ದಾರೆ. ‌

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ  ಮೂಲಕ ಕರಿಯರ್ ಆರಂಭಿಸಿದ ರಶ್ಮಿಕಾ ಮಂದಣ್ಣ ಅವರು ಕಳೆದ ವರ್ಷ ಅಂತರಾಷ್ಟ್ರೀಯ ಸಿನಿಮೋತ್ಸವಕ್ಕೆ ಆಹ್ವಾನ ನೀಡಿದಾಗ ನಿರಾಕರಿಸಿದ್ದರು. ನನ್ನ ಮನೆ ಹೈದರಾಬಾದ್‌ನಲ್ಲಿದೆ, ಕರ್ನಾಟಕ ಎಲ್ಲಿದೆ ಎಂದು ನನಗೆ ಗೊತ್ತಿಲ್ಲ, ನನಗೆ ಸಮಯವಿಲ್ಲ, ನನಗೆ ಬರಲು ಸಾಧ್ಯವಿಲ್ಲ ಎಂದಿದ್ದರು. ಆದರೂ ನಮ್ಮ ಶಾಸಕರೊಬ್ಬರು ಅವರ ಮನೆಗೆ ಭೇಟಿ ನೀಡಿ ಆಹ್ವಾನ ನೀಡಿದ್ದರು.  ಕನ್ನಡವನ್ನು ಕಡೆಗಣಿಸಿರುವ ಅವರಿಗೆ ಸರಿಯಾದ ಪಾಠ ಕಲಿಸಬೇಕಲ್ಲವೇ ಎಂದು ಪ್ರಶ್ನೆ ಮಾಡಿದರು.

ಇತ್ತೀಚೆಗೆ ಸಿನಿಮಾ ಕಾರ್ಯಕ್ರಮವೊಂದರಲ್ಲಿ ನಾನು ಹೈದರಾಬಾದ್‌ನಿಂದ ಬಂದವಳು ಎನ್ನುವ ಮೂಲಕ ರಶ್ಮಿಕಾ ಕನ್ನಡಿಗರ ಆಕ್ರೋಶಕ್ಕೆ ತುತ್ತಾಗಿದ್ದರು.

ಕೆಲವು ಕನ್ನಡ ಪರ ಅವರು ರಶ್ಮಿಕಾ ವಿರುದ್ಧ ಅಭಿಯಾನವನ್ನು ಪ್ರಾರಂಭಿಸಿ, ಕನ್ನಡ ಮೂಲಕ ಸಿನಿಮಾ ಜರ್ನಿಯನ್ನು ಆರಂಭಿಸಿದ ರಶ್ಮಿಕಾ ಇದೀಗ ಕನ್ನಡಕ್ಕೆ ಅಗೌರವ ಕೊಡುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಮುಂದಿನ ಸುದ್ದಿ
Show comments