Webdunia - Bharat's app for daily news and videos

Install App

‘ನನ್ನ ಗಂಡನ ಸಾವು ಆತ್ಮಹತ್ಯೆ ಅಲ್ಲ, ಕೊಲೆ’

Webdunia
ಬುಧವಾರ, 13 ಏಪ್ರಿಲ್ 2022 (19:54 IST)
ನನ್ನ ಗಂಡನ ಸಾವು ಆತ್ಮಹತ್ಯೆ ಅಲ್ಲ, ಕೊಲೆಯಾಗಿದ್ದು ಗಂಡನ ಸಾವಿಗೆ ಕಾರಣವಾದ ಈಶ್ವರಪ್ಪನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಬೆಳಗಾವಿಯಲ್ಲಿ ಮೃತ ಸಂತೋಷ ಪತ್ನಿ ಜಯಶ್ರೀ ಪಾಟೀಲ್ ಕಿಡಿಕಾರಿದ್ದಾರೆ. ಈಶ್ವರಪ್ಪ ಕೇಳಿರುವ ಕಮಿಷನ್ ಬಗ್ಗೆ ನನ್ನ ಮುಂದೆ ಹೇಳಿಕೊಂಡಿದ್ದರು. 4 ಕೋಟಿ ಕಾಮಗಾರಿ ಮಾಡಿದ್ದೇನೆ. ಈಶ್ವರಪ್ಪ 40% ಕಮಿಷನ್ ಕೇಳುತ್ತಿದ್ದಾರೆ. 40% ಕಮಿಷನ್ ಕೊಟ್ಟರೆ ನಾನು ಸಂಪೂರ್ಣ ಹಾಳಾಗುತ್ತೇನೆ ಎನ್ನುತ್ತಿದ್ದರು. ಮೈಮೇಲೆ ಇದ್ದ ಬಂಗಾರ ಅಡವಿಟ್ಟು 108 ಕಾಮಗಾರಿ ಮಾಡಿಸಿದರು. ಬಿಲ್ ಬಂದ ಮೇಲೆ ಬಂಗಾರ ಆಭರಣಗಳನ್ನು ಬಿಡಿಸಿ ಕೊಡುತ್ತೇನೆ ಅಂತಾ ಹೇಳಿದ್ರು.. ಆತ್ಮಹತ್ಯೆಗೂ ಮುನ್ನ ಸಂಜೆ 7 ಗಂಟೆಗೆ ಫೋನ್​​ನಲ್ಲಿ ಚೆನ್ನಾಗಿಯೇ ಮಾತನಾಡಿದ್ದರು..ಬೆಳಗ್ಗೆ ಫೋನ್ ಮಾಡಿದರೆ ಫೋನ್ ರಿಸೀವ್ ಮಾಡಲಿಲ್ಲ. ಬೇರೆಯವರ ಮೂಲಕ ಆತ್ಮಹತ್ಯೆ ವಿಷಯ ಗೊತ್ತಾಯಿತು ಎಂದು ಕಣ್ಣೀರು ಹಾಕಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ಥರಾ ಪ್ರತಾಪ್ ಸಿಂಹ ಮೊಬೈಲ್ ನೋಡಿದ್ರೆ ಜೈಲಿಗೇ ಹಾಕ್ಬೇಕಾಗುತ್ತೆ: ಎಂ ಲಕ್ಷ್ಮಣ

ಮದರಸಾ ಗುರುಗಳಿಗೆ ಕನ್ನಡ, ಅಲ್ಪಸಂಖ್ಯಾತರ ಸಾಮೂಹಿಕ ಮದುವೆಗೆ 50000 ಕೊಡ್ತೇವೆ: ಜಮೀರ್ ಅಹ್ಮದ್

ಆರ್ ಅಶೋಕ್ ಗೆ ಬೆಂಡೆತ್ತಿದ್ದ ಸಿಎಂ ಸಿದ್ದರಾಮಯ್ಯ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments