Publish Date: Sat, 20 Aug 2022 (11:07 IST)
Updated Date: Sat, 20 Aug 2022 (11:09 IST)
ಚಿಕ್ಕಮಗಳೂರು : ನಿನ್ನೆ ಕೊಡಗು ಜಿಲ್ಲೆಯಲ್ಲಿ ಮಳೆಹಾನಿ ಪ್ರದೇಶಕ್ಕೆ ಪ್ರವಾಸ ಕೈಗೊಂಡು ಸರಣಿ ಪ್ರತಿಭಟನೆ ಎದುರಿಸಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.
ಇದೇ ಮೊದಲ ಬಾರಿಗೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರನ್ನು ರಂಭಾಪುರಿ ಶ್ರೀಗಳು ಮಂತ್ರ-ಘೋಷಗಳ ಮೂಲಕ ಸ್ವಾಗತಿಸಿದ್ದಾರೆ.
ಅಲ್ಲದೇ ಕಾಶಿಯ ಹಾರ ನೀಡಿ ಮುಂದಿನ ಚುನಾವಣೆವರೆಗೂ ನಿಮ್ಮ ಕೊರಳಲ್ಲೇ ಇರಲಿ ಎಂದು ಆಶೀರ್ವಾದ ಮಾಡಿದ್ದಾರೆ. ಬಳಿಕ ಬರ್ತೀನಿ… ಬರ್ತೀನಿ… ಅಂದು ಈಗ ಬಂದಿದ್ದೀರಾ.. ಎಂದೂ ಪ್ರಶ್ನಿಸಿದ್ದಾರೆ.