Publish Date: Fri, 16 Dec 2022 (11:57 IST)
Updated Date: Fri, 16 Dec 2022 (12:00 IST)
ಕೊಪ್ಪಳ : ಮಾಜಿ ಸಿಎಂ ಯಡಿಯೂರಪ್ಪ ಹಾಗೂ ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ. ನನ್ನ ಹಾಗೂ ಅವರ ನಡುವಿನ ಸಂಬಂಧ ತಂದೆ-ಮಗನ ಸಂಬಂಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು.
ಕೊಪ್ಪಳದ ಖಾಸಗಿ ವಿಮಾನ ನಿಲ್ದಾಣದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎನ್ನುವುದು ಶುದ್ಧ ಸುಳ್ಳು. ಅವರನ್ನು ಮುಂದಿಟ್ಟುಕೊಂಡೇ ಚುನಾವಣೆಗೆ ಹೋಗುತ್ತೇವೆ ಎಂದು ತಿಳಿಸಿದರು.
ಶಾಸಕ ಪ್ರಿಯಾಂಕ್ ಖರ್ಗೆ ಅವರ ಬಿಜೆಪಿ ಮನೆಯೊಂದು ಮೂರು ಬಾಗಿಲು ಹೇಳಿಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಾಂಗ್ರೆಸ್ಗೆ ಬಾಗಿಲು ಇಲ್ಲ, ಕಿಟಕಿಯೂ ಇಲ್ಲ ಎಂದು ತಿರುಗೇಟು ನೀಡಿದರು.