‘ನನ್ನ ಮೌನವೂ ವೀಕ್ನೆಸ್ ಅಲ್ಲ’

Webdunia
ಶನಿವಾರ, 21 ಅಕ್ಟೋಬರ್ 2023 (15:47 IST)
ಬೆಳಗಾವಿ ರಾಜಕಾರಣ ಮತ್ತೆ ಗರಿಗೆದರಿದೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿನ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿದೆ. ನನ್ನ ಮೌನ ವೀಕ್ನೆಸ್​ ಅಲ್ಲ ಅಂತ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಪರೋಕ್ಷವಾಗಿ ಲಕ್ಷಿ ಹೆಬ್ಬಾಳ್ಕರ್​ ವಿರುದ್ಧ ವಾಗ್ದಾಳಿ ಮಾಡಿದ್ದರು. ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ “ನನ್ನ ಮೌನವೂ ವೀಕ್ನೆಸ್ ಅಲ್ಲ” ಎಂದು ಹೇಳುವ ಮೂಲಕ ಸತೀಶ್ ಜಾರಕಿಹೊಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಜಿಲ್ಲಾ ಕಾಂಗ್ರೆಸ್​ನಲ್ಲಿ ಸಣ್ಣ ಸಮಸ್ಯೆ ಕೂಡ ಇಲ್ಲ. ಬಹಳಷ್ಟು ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ. ನನ್ನ ಮತ್ತು ಸತೀಶ್ ಅಣ್ಣವರ ಮಧ್ಯೆ ಯಾವುದೇ ಸಮಸ್ಯೆ ಇಲ್ಲ. ಮೈಸೂರಿಗೆ ಹೋಗಲು ಸತೀಶ್ ಜಾರಕಿಹೊಳಿ ಅಣ್ಣ ನನ್ನನ್ನು ಕರೆದಿದ್ದರು. ನನ್ನ ಟಿಕೆಟ್ ಕೂಡ ಬುಕ್ ಮಾಡಿದ್ದರು. ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು ಮೈಸೂರು ಹೋಗಲು ಪ್ಲ್ಯಾನ್ ಮಾಡಿದ್ದರು. ಸಕ್ಕರೆ ಕಾರ್ಖಾನೆ ಬಾಯ್ಲರ್ ಪೂಜೆ ಹಿನ್ನೆಲೆಯಲ್ಲಿ ನಾನು ಹೋಗಲಿಲ್ಲ ಎಂದು ತಮ್ಮ ಮತ್ತು ಸತೀಶ್​ ಜಾರಕಿಹೊಳಿ ಮಧ್ಯೆ ಮುಸುಕಿನ ಗುದ್ದಾಟವಿದೆ ಎಂಬ ವದಂತಿಗೆ ಸ್ಪಷ್ಟನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments