ಇದೇ ಕಾರಣಕ್ಕೆ ದರ್ಶನ್ ಗ್ಯಾಂಗ್‌ ಜತೆ ನನ್ನ ಮಗ ಹೋಗಿದ್ದು

Sampriya
ಸೋಮವಾರ, 30 ಸೆಪ್ಟಂಬರ್ 2024 (15:51 IST)
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ15 ಆರೋಪಿ ಕಾರ್ತಿಕ್‌ಗೆ ಜಾಮೀನು ಮಂಜೂರಾಗಿ 5 ದಿನ ಕಳೆದರೂ ಇನ್ನೂ ಜೈಲಿನಿಂದ ಬಿಡುಗಡೆಯಾಗಿಲ್ಲ. ಬಡವರಾಗಿರುವ ಕಾರ್ತಿಕ್ ಕುಟುಂಬ ಇದೀಗ ಸಹಾಯ ಕೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಬಡವರು. ಜಾಮೀನು ಸಿಕ್ಕರೂ ಶ್ಯೂರಿಟಿ ನೀಡಲು ಸಾಧ್ಯವಾಗದ ಕಾರಣ ನಮ್ಮ ಮಗನನ್ನ ಹೇಗೆ ಕರೆತರೋದು ಎಂದು ಗೊತ್ತಾಗುತ್ತಿಲ್ಲ. ದುಡಿಯುವ ಮಗನನ್ನ ಬಿಡಿಸಿಕೊಳ್ಳಲು ಆಗುತ್ತಿಲ್ಲ. ಜಾಮೀನು ಸಿಕ್ಕಿ 5 ದಿನವಾದರೂ ಬಿಡುಗಡೆಯಾಗಲಿಲ್ಲ. ದಯವಿಟ್ಟು ನಮಗೆ ಯಾರಾದರೂ ಸಹಾಯ ಮಾಡಿ ಎಂದಿದ್ದಾರೆ.

ಶ್ಯೂರಿಟಿ ನೀಡಲು ನಮಗೆ ಶಕ್ತಿ ಇಲ್ಲ. ಆಕ್ಸಿಡೆಂಟ್ ಆಗಿ ಕಾಲು ಮುರಿದಿತ್ತು. ಆಗ ನನಗೆ ಎಂದು ನಾಲ್ಕೈದು ಲಕ್ಷ ಸಾಲ ಮಾಡಿದ್ದ. ಅದನ್ನ ತೀರಿಸುವ ಸಲುವಾಗಿ ಅವರ ಜತೆ ಹೋಗಿದ್ದಾನೆ. ನನ್ನ ಮಗ ಇಂತಹ ಕೆಲಸ ಮಾಡುವವನಲ್ಲ ಎಂದರು. ದರ್ಶನ್ ಕುಟುಂಬ ನಮಗೆ ಪರಿಚಯವಿಲ್ಲ. ದರ್ಶನ್ ಫ್ಯಾನ್ಸ್ ಕೂಡಾ ನಮ್ಮನ್ನು ಸಂಪರ್ಕಿಸಿಲ್ಲ. ಯಾರಾದರೂ ನಮ್ಮ ಮಗನನ್ನು ಬಿಡುಗಡೆ ಮಾಡಲು ಸಹಾಯ ಮಾಡಿ ಎಂದು ಅಳಲು ತೋಡಿಕೊಂಡಿದ್ದಾರೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments