Webdunia - Bharat's app for daily news and videos

Install App

ಇದೇ ಕಾರಣಕ್ಕೆ ದರ್ಶನ್ ಗ್ಯಾಂಗ್‌ ಜತೆ ನನ್ನ ಮಗ ಹೋಗಿದ್ದು

Sampriya
ಸೋಮವಾರ, 30 ಸೆಪ್ಟಂಬರ್ 2024 (15:51 IST)
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ15 ಆರೋಪಿ ಕಾರ್ತಿಕ್‌ಗೆ ಜಾಮೀನು ಮಂಜೂರಾಗಿ 5 ದಿನ ಕಳೆದರೂ ಇನ್ನೂ ಜೈಲಿನಿಂದ ಬಿಡುಗಡೆಯಾಗಿಲ್ಲ. ಬಡವರಾಗಿರುವ ಕಾರ್ತಿಕ್ ಕುಟುಂಬ ಇದೀಗ ಸಹಾಯ ಕೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಬಡವರು. ಜಾಮೀನು ಸಿಕ್ಕರೂ ಶ್ಯೂರಿಟಿ ನೀಡಲು ಸಾಧ್ಯವಾಗದ ಕಾರಣ ನಮ್ಮ ಮಗನನ್ನ ಹೇಗೆ ಕರೆತರೋದು ಎಂದು ಗೊತ್ತಾಗುತ್ತಿಲ್ಲ. ದುಡಿಯುವ ಮಗನನ್ನ ಬಿಡಿಸಿಕೊಳ್ಳಲು ಆಗುತ್ತಿಲ್ಲ. ಜಾಮೀನು ಸಿಕ್ಕಿ 5 ದಿನವಾದರೂ ಬಿಡುಗಡೆಯಾಗಲಿಲ್ಲ. ದಯವಿಟ್ಟು ನಮಗೆ ಯಾರಾದರೂ ಸಹಾಯ ಮಾಡಿ ಎಂದಿದ್ದಾರೆ.

ಶ್ಯೂರಿಟಿ ನೀಡಲು ನಮಗೆ ಶಕ್ತಿ ಇಲ್ಲ. ಆಕ್ಸಿಡೆಂಟ್ ಆಗಿ ಕಾಲು ಮುರಿದಿತ್ತು. ಆಗ ನನಗೆ ಎಂದು ನಾಲ್ಕೈದು ಲಕ್ಷ ಸಾಲ ಮಾಡಿದ್ದ. ಅದನ್ನ ತೀರಿಸುವ ಸಲುವಾಗಿ ಅವರ ಜತೆ ಹೋಗಿದ್ದಾನೆ. ನನ್ನ ಮಗ ಇಂತಹ ಕೆಲಸ ಮಾಡುವವನಲ್ಲ ಎಂದರು. ದರ್ಶನ್ ಕುಟುಂಬ ನಮಗೆ ಪರಿಚಯವಿಲ್ಲ. ದರ್ಶನ್ ಫ್ಯಾನ್ಸ್ ಕೂಡಾ ನಮ್ಮನ್ನು ಸಂಪರ್ಕಿಸಿಲ್ಲ. ಯಾರಾದರೂ ನಮ್ಮ ಮಗನನ್ನು ಬಿಡುಗಡೆ ಮಾಡಲು ಸಹಾಯ ಮಾಡಿ ಎಂದು ಅಳಲು ತೋಡಿಕೊಂಡಿದ್ದಾರೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments