Webdunia - Bharat's app for daily news and videos

Install App

ಇದೇ ಕಾರಣಕ್ಕೆ ದರ್ಶನ್ ಗ್ಯಾಂಗ್‌ ಜತೆ ನನ್ನ ಮಗ ಹೋಗಿದ್ದು

Sampriya
ಸೋಮವಾರ, 30 ಸೆಪ್ಟಂಬರ್ 2024 (15:51 IST)
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ15 ಆರೋಪಿ ಕಾರ್ತಿಕ್‌ಗೆ ಜಾಮೀನು ಮಂಜೂರಾಗಿ 5 ದಿನ ಕಳೆದರೂ ಇನ್ನೂ ಜೈಲಿನಿಂದ ಬಿಡುಗಡೆಯಾಗಿಲ್ಲ. ಬಡವರಾಗಿರುವ ಕಾರ್ತಿಕ್ ಕುಟುಂಬ ಇದೀಗ ಸಹಾಯ ಕೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಬಡವರು. ಜಾಮೀನು ಸಿಕ್ಕರೂ ಶ್ಯೂರಿಟಿ ನೀಡಲು ಸಾಧ್ಯವಾಗದ ಕಾರಣ ನಮ್ಮ ಮಗನನ್ನ ಹೇಗೆ ಕರೆತರೋದು ಎಂದು ಗೊತ್ತಾಗುತ್ತಿಲ್ಲ. ದುಡಿಯುವ ಮಗನನ್ನ ಬಿಡಿಸಿಕೊಳ್ಳಲು ಆಗುತ್ತಿಲ್ಲ. ಜಾಮೀನು ಸಿಕ್ಕಿ 5 ದಿನವಾದರೂ ಬಿಡುಗಡೆಯಾಗಲಿಲ್ಲ. ದಯವಿಟ್ಟು ನಮಗೆ ಯಾರಾದರೂ ಸಹಾಯ ಮಾಡಿ ಎಂದಿದ್ದಾರೆ.

ಶ್ಯೂರಿಟಿ ನೀಡಲು ನಮಗೆ ಶಕ್ತಿ ಇಲ್ಲ. ಆಕ್ಸಿಡೆಂಟ್ ಆಗಿ ಕಾಲು ಮುರಿದಿತ್ತು. ಆಗ ನನಗೆ ಎಂದು ನಾಲ್ಕೈದು ಲಕ್ಷ ಸಾಲ ಮಾಡಿದ್ದ. ಅದನ್ನ ತೀರಿಸುವ ಸಲುವಾಗಿ ಅವರ ಜತೆ ಹೋಗಿದ್ದಾನೆ. ನನ್ನ ಮಗ ಇಂತಹ ಕೆಲಸ ಮಾಡುವವನಲ್ಲ ಎಂದರು. ದರ್ಶನ್ ಕುಟುಂಬ ನಮಗೆ ಪರಿಚಯವಿಲ್ಲ. ದರ್ಶನ್ ಫ್ಯಾನ್ಸ್ ಕೂಡಾ ನಮ್ಮನ್ನು ಸಂಪರ್ಕಿಸಿಲ್ಲ. ಯಾರಾದರೂ ನಮ್ಮ ಮಗನನ್ನು ಬಿಡುಗಡೆ ಮಾಡಲು ಸಹಾಯ ಮಾಡಿ ಎಂದು ಅಳಲು ತೋಡಿಕೊಂಡಿದ್ದಾರೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments