Webdunia - Bharat's app for daily news and videos

Install App

ಸ್ವಪಕ್ಷೀಯರಿಂದಲೇ ನನ್ನ ತೇಜೋವಧೆ, ಹಲ್ಲೆಗೆ ಯತ್ನ: ಮುಡಾ ಅಧ್ಯಕ್ಷ ಮರೀಗೌಡ ಬೇಸರ

Sampriya
ಸೋಮವಾರ, 30 ಸೆಪ್ಟಂಬರ್ 2024 (14:04 IST)
ಮೈಸೂರು: ಸದ್ಯಕ್ಕೆ ರಾಜೀನಾಮೆ ಕೊಡುವ ಯೋಚನೆ ಇಲ್ಲ. ಸಿದ್ದರಾಮಯ್ಯ ಅವರೇ ನನ್ನ ಹೈಕಮಾಂಡ್. ಅವರು ಸೂಚಿಸಿದರೆ ರಾಜೀನಾಮೆಗೂ ಸಿದ್ದನಿದ್ದೇನೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಮರೀಗೌಡ ಸ್ಪಷ್ಟನೆ ನೀಡಿದರು.

ಸಿದ್ದರಾಮಯ್ಯರ ಇಂದಿನ ಸ್ಥಿತಿಗೆ ನಾನೇ ಕಾರಣ ಎಂದು ಆರೋಪಿಸಿ ಕಾಂಗ್ರೆಸ್ ನ ಕೆಲ ಕಾರ್ಯಕರ್ತರು ಕಳೆದ ಶುಕ್ರವಾರ ಮೈಸೂರು ವಿಮಾನ ನಿಲ್ದಾಣದಲ್ಲಿ ನನ್ನ ಮೇಲೆ ಹಲ್ಲೆಗೆ ಯತ್ನಿಸಿದರು. ಸ್ವಪಕ್ಷೀಯರ ಈ ಗಲಾಟೆ ತೀವ್ರ ನೋವು ತಂದಿದೆ ಎಂದು ಹೇಳಿದರು.

50:50 ನಿವೇಶನಗಳ ಹಂಚಿಕೆ ಆಗಿರುವುದು 2020ರಿಂದ. ನಾನು ಮುಡಾ ಅಧ್ಯಕ್ಷ ಆಗಿದ್ದು 2024ರ ಮಾರ್ಚ್ 1ರಿಂದ. ಹೀಗಾಗಿ ಹಿಂದಿನ ಪ್ರಕರಣಗಳಿಗೂ ನನಗೂ ಸಂಬಂಧ ಇಲ್ಲ ಎಂದರು.

ಸಿದ್ದರಾಮಯ್ಯ ನನ್ನ ಮನೆದೇವರು. ಎಂದಿಗೂ ಅವರು ಹಾಗೂ ಅವರ ಕುಟುಂಬಕ್ಕೆ ದ್ರೋಹ ಬಗೆಯುವ ಕೆಲಸ ಮಾಡುವುದಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ನಿನ್ನ ಕಾಲದಲ್ಲಿ ಏನು ಆಗಿಲ್ಲ ಬಿಡು ಎಂದು ಸ್ವತಃ ಸಿದ್ದರಾಮಯ್ಯ ಅವರೇ ನನಗೆ ಸಮಾಧಾನ ಮಾಡಿದ್ದಾರೆ‌. ಸ್ವಪಕ್ಷೀಯರು ನನ್ನ ತೇಜೋವಧೆ ಮಾಡುವುದನ್ನು ಇನ್ನಾದರೂ ಬಿಡಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments