Webdunia - Bharat's app for daily news and videos

Install App

ಸ್ವಪಕ್ಷೀಯರಿಂದಲೇ ನನ್ನ ತೇಜೋವಧೆ, ಹಲ್ಲೆಗೆ ಯತ್ನ: ಮುಡಾ ಅಧ್ಯಕ್ಷ ಮರೀಗೌಡ ಬೇಸರ

Sampriya
ಸೋಮವಾರ, 30 ಸೆಪ್ಟಂಬರ್ 2024 (14:04 IST)
ಮೈಸೂರು: ಸದ್ಯಕ್ಕೆ ರಾಜೀನಾಮೆ ಕೊಡುವ ಯೋಚನೆ ಇಲ್ಲ. ಸಿದ್ದರಾಮಯ್ಯ ಅವರೇ ನನ್ನ ಹೈಕಮಾಂಡ್. ಅವರು ಸೂಚಿಸಿದರೆ ರಾಜೀನಾಮೆಗೂ ಸಿದ್ದನಿದ್ದೇನೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಮರೀಗೌಡ ಸ್ಪಷ್ಟನೆ ನೀಡಿದರು.

ಸಿದ್ದರಾಮಯ್ಯರ ಇಂದಿನ ಸ್ಥಿತಿಗೆ ನಾನೇ ಕಾರಣ ಎಂದು ಆರೋಪಿಸಿ ಕಾಂಗ್ರೆಸ್ ನ ಕೆಲ ಕಾರ್ಯಕರ್ತರು ಕಳೆದ ಶುಕ್ರವಾರ ಮೈಸೂರು ವಿಮಾನ ನಿಲ್ದಾಣದಲ್ಲಿ ನನ್ನ ಮೇಲೆ ಹಲ್ಲೆಗೆ ಯತ್ನಿಸಿದರು. ಸ್ವಪಕ್ಷೀಯರ ಈ ಗಲಾಟೆ ತೀವ್ರ ನೋವು ತಂದಿದೆ ಎಂದು ಹೇಳಿದರು.

50:50 ನಿವೇಶನಗಳ ಹಂಚಿಕೆ ಆಗಿರುವುದು 2020ರಿಂದ. ನಾನು ಮುಡಾ ಅಧ್ಯಕ್ಷ ಆಗಿದ್ದು 2024ರ ಮಾರ್ಚ್ 1ರಿಂದ. ಹೀಗಾಗಿ ಹಿಂದಿನ ಪ್ರಕರಣಗಳಿಗೂ ನನಗೂ ಸಂಬಂಧ ಇಲ್ಲ ಎಂದರು.

ಸಿದ್ದರಾಮಯ್ಯ ನನ್ನ ಮನೆದೇವರು. ಎಂದಿಗೂ ಅವರು ಹಾಗೂ ಅವರ ಕುಟುಂಬಕ್ಕೆ ದ್ರೋಹ ಬಗೆಯುವ ಕೆಲಸ ಮಾಡುವುದಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ನಿನ್ನ ಕಾಲದಲ್ಲಿ ಏನು ಆಗಿಲ್ಲ ಬಿಡು ಎಂದು ಸ್ವತಃ ಸಿದ್ದರಾಮಯ್ಯ ಅವರೇ ನನಗೆ ಸಮಾಧಾನ ಮಾಡಿದ್ದಾರೆ‌. ಸ್ವಪಕ್ಷೀಯರು ನನ್ನ ತೇಜೋವಧೆ ಮಾಡುವುದನ್ನು ಇನ್ನಾದರೂ ಬಿಡಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭುವನೇಶ್ವರಿಯನ್ನು ಒಪ್ಪದ ಬಾನು ಮುಷ್ತಾಕ್ ಈಗ ಚಾಮುಂಡಿಯನ್ನು ಒಪ್ಪುತ್ತಾರಾ: ಪ್ರತಾಪಸಿಂಹ ಪ್ರಶ್ನೆ

ಪಾರ್ಟಿ ವೇಳೆ ಬಹುಮಹಡಿ ಕಟ್ಟಡ ಕುಸಿತ: ಅವಶೇಷಗಳ ಅಡಿಯಲ್ಲಿ 15ರಿಂದ 20 ಮಂದಿ ಸಿಲುಕಿರುವ ಶಂಕೆ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ತಾರಕಕ್ಕೇರಿದ ಸುಂಕ ಸಮರ: ದೊಡ್ಡಣ್ಣ ನಾಲ್ಕು ಬಾರಿ ಕರೆಮಾಡಿದರೂ ಕ್ಯಾರೇ ಎನ್ನದ ನರೇಂದ್ರ ಮೋದಿ

ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

ಮುಂದಿನ ಸುದ್ದಿ
Show comments