Select Your Language

Notifications

webdunia
webdunia
webdunia
webdunia

ಹುಣಸೂರು ಕ್ಷೇತ್ರದಲ್ಲಿ ನನ್ನ ಗೆಲುವು ನಿಶ್ಚಿತ- ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ವಿಶ್ವಾಸ

ಹುಣಸೂರು ಕ್ಷೇತ್ರದಲ್ಲಿ ನನ್ನ ಗೆಲುವು ನಿಶ್ಚಿತ- ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ವಿಶ್ವಾಸ
ಮೈಸೂರು , ಸೋಮವಾರ, 9 ಡಿಸೆಂಬರ್ 2019 (10:15 IST)
ಮೈಸೂರು : ಉಪಚುನಾವಣೆಯ ಮತ ಎಣಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ಹುಣಸೂರು ಕ್ಷೇತ್ರದಲ್ಲಿ ನನ್ನ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.



ಇಂದು ಫಲಿತಾಂಶದ ಹಿನ್ನಲೆಯಲ್ಲಿ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಕುಟುಂಬ ಸಮೇತ ಸಾಯಿ ಬಾಬನ ದರ್ಶನ ಪಡೆದು ಬೆಳ್ಳಿ ಪಾದವನ್ನು ಕಾಣಿಕೆಯಾಗಿ ನೀಡಿ ಪೂಜೆ ಸಲ್ಲಿಸಿದ್ದಾರೆ.  ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಣಸೂರಿನಲ್ಲಿ ನನ್ನ ಗೆಲುವು ನಿಶ್ಚಿತ. ಕಾರ್ಯಕರ್ತರು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ಕೇಸ್ ಹಾಕಿಸಿಕೊಳ್ಳಬೇಡಿ ಎಂದು ಕರೆ ನೀಡಿದ್ದಾರೆ.


ಅಲ್ಲದೇ 5ನೇ ಸುತ್ತಿನ ಮತ ಎಣಿಕೆಯಲ್ಲಿಯೂ ನಿರಂತರವಾಗಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್  ಮುನ್ನಡೆ ಸಾಧಿಸಿದ್ದು, 21, 097 ಮತಗಳನ್ನು ಪಡೆದಿದ್ದಾರೆ ಎನ್ನಲಾಗಿದೆ .


Share this Story:

Follow Webdunia kannada

ಮುಂದಿನ ಸುದ್ದಿ

ಅಂಚೆ ಮತದಲ್ಲಿ 250ಕ್ಕೆ 250 ಮತ ಪಡೆದ ಆನಂದ್ ಸಿಂಗ್