ನನ್ನ ಹೆಂಡತಿಗೆ ಅರಶಿನ ಕುಂಕುಮ ರೂಪದಲ್ಲಿ ಸೈಟ್ ಬಂದಿತ್ತು: ಮುಡಾ ಅಕ್ರಮ ಕುರಿತು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Sampriya
ಮಂಗಳವಾರ, 2 ಜುಲೈ 2024 (14:48 IST)
ಬೆಂಗಳೂರು: 50:50 ಅನುಪಾತದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಇದು ಬಿಜೆಪಿಯವರ ಕಾಲದಲ್ಲಿ ಆಗಿದ್ದು. 1 ಎಕರೆ 15ಗುಂಟೆ ಜಮೀನು ನನ್ನ ಹೆಂಡತಿ ಹೆಸರಿನಲ್ಲಿದೆ.  ಮುಡಾದಲ್ಲಿ ನನ್ನ ಬಾಮೈದ ಜಮೀನು ಖರೀದಿಸಿ ಅರಿಶಿನ-ಕುಂಕುಮ ರೀತಿಯಲ್ಲಿ ನನ್ನ ಮಡದಿಗೆ ಉಡುಗೊರೆ ರೂಪದಲ್ಲಿ ನೀಡಿದ್ದಾರೆ ಎಂದು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಕಾನೂನಿನ ಪ್ರಕಾರ 50:50 ಅನುಪಾತದಲ್ಲಿ ಜಮೀನು ಕೊಡುವುದಾಗಿ ಮುಡಾ ಹೇಳಿದೆ. ಆದರೆ ಮುಡಾದವರು ಜಮೀನನ್ನು ಸೈಟುಗಳನ್ನಾಗಿ ಮಾಡಿ ಹಂಚಿಬಿಟ್ಟರು. ಬಳಿಕ ಜಮೀನಿಲ್ಲದೇ ಹಾಗೇ ಕೊಡುವುದಾಗಿ ಹೇಳಿದರು. ಅದಕ್ಕೆ ಕಾನೂನಿನ ಪ್ರಕಾರ ಬೇರೆ ಕಡೆ ಜಮೀನು ಕೊಟ್ಟಿದ್ದಾರೆ. ಇದು ತಪ್ಪಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟುಗಳ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿರುವ ಆರೋಪ ಕೇಳಿಬರುತ್ತಿದ್ದು, ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಕೇಳಿಬಂದಿದೆ. ಇನ್ನೂ ಸಿದ್ದರಾಮಯ್ಯ ಅವರು ಪತ್ನಿ ಹೆಸರಿನಲ್ಲೂ ಜಮೀನು ಇದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ದೇವಸ್ಥಾನದ ಚಿನ್ನ ಕಳವು: ಕೇರಳ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ಸಮೀಕ್ಷೆಯಿಂದಾಗಿ ಮಕ್ಕಳ ಕಲಿಕೆಗೆ ಭಾರೀ ಪೆಟ್ಟು: ವಿಜಯೇಂದ್ರ ಆಕ್ರೋಶ

ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ತಾಯಿ, ಪತಿಯ ಈ ಬೆದರಿಕೆಯೇ ಕಾರಣವಾಯಿತೇ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments