Webdunia - Bharat's app for daily news and videos

Install App

ನನ್ನ ಹೆಂಡತಿಗೆ ಅರಶಿನ ಕುಂಕುಮ ರೂಪದಲ್ಲಿ ಸೈಟ್ ಬಂದಿತ್ತು: ಮುಡಾ ಅಕ್ರಮ ಕುರಿತು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Sampriya
ಮಂಗಳವಾರ, 2 ಜುಲೈ 2024 (14:48 IST)
ಬೆಂಗಳೂರು: 50:50 ಅನುಪಾತದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಇದು ಬಿಜೆಪಿಯವರ ಕಾಲದಲ್ಲಿ ಆಗಿದ್ದು. 1 ಎಕರೆ 15ಗುಂಟೆ ಜಮೀನು ನನ್ನ ಹೆಂಡತಿ ಹೆಸರಿನಲ್ಲಿದೆ.  ಮುಡಾದಲ್ಲಿ ನನ್ನ ಬಾಮೈದ ಜಮೀನು ಖರೀದಿಸಿ ಅರಿಶಿನ-ಕುಂಕುಮ ರೀತಿಯಲ್ಲಿ ನನ್ನ ಮಡದಿಗೆ ಉಡುಗೊರೆ ರೂಪದಲ್ಲಿ ನೀಡಿದ್ದಾರೆ ಎಂದು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಕಾನೂನಿನ ಪ್ರಕಾರ 50:50 ಅನುಪಾತದಲ್ಲಿ ಜಮೀನು ಕೊಡುವುದಾಗಿ ಮುಡಾ ಹೇಳಿದೆ. ಆದರೆ ಮುಡಾದವರು ಜಮೀನನ್ನು ಸೈಟುಗಳನ್ನಾಗಿ ಮಾಡಿ ಹಂಚಿಬಿಟ್ಟರು. ಬಳಿಕ ಜಮೀನಿಲ್ಲದೇ ಹಾಗೇ ಕೊಡುವುದಾಗಿ ಹೇಳಿದರು. ಅದಕ್ಕೆ ಕಾನೂನಿನ ಪ್ರಕಾರ ಬೇರೆ ಕಡೆ ಜಮೀನು ಕೊಟ್ಟಿದ್ದಾರೆ. ಇದು ತಪ್ಪಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟುಗಳ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿರುವ ಆರೋಪ ಕೇಳಿಬರುತ್ತಿದ್ದು, ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಕೇಳಿಬಂದಿದೆ. ಇನ್ನೂ ಸಿದ್ದರಾಮಯ್ಯ ಅವರು ಪತ್ನಿ ಹೆಸರಿನಲ್ಲೂ ಜಮೀನು ಇದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

ಮುಂದಿನ ಸುದ್ದಿ
Show comments