Select Your Language

Notifications

webdunia
webdunia
webdunia
webdunia

ಮೈಸೂರು ಸ್ಪೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ 2 ಕ್ಕೆ ಏರಿಕೆ

Mysore blast

Krishnaveni K

ಮೈಸೂರು , ಶುಕ್ರವಾರ, 26 ಡಿಸೆಂಬರ್ 2025 (16:29 IST)
Photo Credit: X
ಮೈಸೂರು: ಅರಮನೆ ಎದುರು ಹೀಲಿಯಂ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ ಈಗ 2 ಕ್ಕೆ ಏರಿಕೆಯಾಗಿದೆ.

ಮೈಸೂರು ಅರಮನೆ ಬಳಿ ಬಲೂನ್ ಮಾರಾಟ ಮಾಡುತ್ತಿದ್ದ ಸಲೀಂ ಎಂಬಾತನ ಬಳಿಯಿದ್ದ ಹೀಲಿಯಂ ಸಿಲಿಂಡರ್ ಸ್ಪೋಟಗೊಂಡು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದ. ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಈ ಪೈಕಿ ಈಗ ಮಂಜುಳಾ ಎನ್ನುವ ಮಹಿಳೆ ಕೂಡಾ ಇದ್ದರು. ಆಕೆ ಈಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ಖಚಿತವಾಗಿದೆ. ಘಟನೆ ಬಳಿಕ ಗಾಯಗೊಂಡಿದ್ದ ಅವರನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಂಜುಳಾ ಸ್ಪೋಟದ ವೇಳೆ ಅಲ್ಲೇ ಪಕ್ಕದಲ್ಲಿದ್ದರು ಎನ್ನಲಾಗಿದೆ. ಮೂಲತಃ ನಂಜನಗೂಡಿನವರಾಗಿದ್ದ ಅವರು ಮೈಸೂರಿಗೆ ಬಂದಿದ್ದರು. ಮನೆಗೆ ವಾಪಸ್ ಮರಳುವ ವೇಳೆ ಸ್ಪೋಟವಾಗಿತ್ತು. ಇನ್ನೂ ಮೂವರು ಗಾಯಗೊಂಡಿದ್ದರು. ಅವರಿಗೆ ಚಿಕಿತ್ಸೆ ಮುಂದುವರಿದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ಏರ್‌ಪೋರ್ಟ್‌ ಪಿಕ್‌ ಅಪ್‌ ನಿಯಮಕ್ಕೆ ಮಿಶ್ರಪ್ರತಿಕ್ರಿಯೆ, ಭಾರೀ ಬದಲಾವಣೆ