Webdunia - Bharat's app for daily news and videos

Install App

ಮೈಸೂರಿನಲ್ಲಿ ನಡು ರಸ್ತೆಯಲ್ಲೇ ಕಾರಿನಿಂದ ದರೋಡೆ ಮಾಡ್ತಿದ್ದರೂ ತಡೆಯೋರೇ ಇಲ್ಲ: ವಿಡಿಯೋ

Krishnaveni K
ಸೋಮವಾರ, 20 ಜನವರಿ 2025 (15:07 IST)
ಮೈಸೂರು: ಬೀದರ್, ಮಂಗಳೂರು ದರೋಡೆ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ನಡೆದಿದೆ. ಮೈಸೂರಿನಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಕಾರಿನಿಂದ ಉದ್ಯಮಿಯೊಬ್ಬರನ್ನು ಖದೀಮರು ದೋಚಿ ಪರಾರಿಯಾಗಿದ್ದಾರೆ.

ಮೈಸೂರು ಜಿಲ್ಲೆಯ ಹಾರೋಹಳ್ಳಿ ಬಳಿ ಘಟನೆ ನಡೆದಿದೆ. ಹಾಡಹಗಲೇ ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಕೇರಳ ಮೂಲದ ಉದ್ಯಮಿಯೊಬ್ಬರಿಂದ ನಗ-ನಗದು ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಮುಖ ಮುಚ್ಚುವಂತೆ ಟೋಪಿ ಹಾಕಿಕೊಂಡು ಬಂದಿದ್ದ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಬಾಗಿಲನ್ನು ಬಲವಂತವಾಗಿ ತೆಗೆಸಿ ಕೈಗೆ ಸಿಕ್ಕಿದ್ದುನ್ನು ಎಳೆದಾಡಿದ್ದಾರೆ. ವಿಶೇಷವೆಂದರೆ ಇಲ್ಲಿ ಬೇರೆ ವಾಹನಗಳು ಇದ್ದರೂ ಏನೂ ಮಾಡಲಾಗದ ಅಸಹಾಯಕತೆ ಎದುರಾಗಿದೆ. ಜನ ಕಿರುಚಾಡಿದರೂ ಯಾರೂ ಸಹಾಯಕ್ಕೆ ಬರುವ ಸ್ಥಿತಿಯಲ್ಲಿರಲಿಲ್ಲ.

ಹಣ ಕಳೆದುಕೊಂಡ ವ್ಯಕ್ತಿಯನ್ನು ಪೊಲೀಸರು ವಿಚಾರಣೆಗೊಳಪಡಿಸುತ್ತಿದ್ದಾರೆ. ಜೊತೆಗೆ ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಸಾಕಷ್ಟು ಜನರ ನಡುವೆಯೇ ಈ ರೀತಿ ದರೋಡೆಕೋರರು ಸ್ವಲ್ಪವೂ ಭಯವಿಲ್ಲದೇ ದರೋಡೆ ನಡೆಸಿರುವುದು ನಿಜಕ್ಕೂ ಆತಂಕಕಾರೀ ವಿಚಾರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments