Daily Horoscope

Mysore Darbhang ಎಕ್ಸ್ ಪ್ರೆಸ್ ರೈಲು ಅಪಘಾತವನ್ನು ದೇವಿಯೇ ತಪ್ಪಿಸಿದಳಾ

Krishnaveni K
ಶನಿವಾರ, 12 ಅಕ್ಟೋಬರ್ 2024 (09:34 IST)
ಮೈಸೂರು: ನಾಡಹಬ್ಬ ದಸರಾ ಸಂಭ್ರಮದಲ್ಲಿರುವಾಗ ತಮಿಳುನಾಡಿನಲ್ಲಿ ಮೈಸೂರು, ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಢಿಕ್ಕಿಯಾಗಿ ಭಾರೀ ಅನಾಹುತ ಸಂಭವಿಸುವುದರಲ್ಲಿತ್ತು. ಆದರೆ ಅದನ್ನು ದೇವಿಯೇ ರಕ್ಷಿಸಿದಳು ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದ್ದಾರೆ.

ನಿನ್ನೆ ರಾತ್ರಿ ತಮಿಳುನಾಡಿನ ತಿರುವಳ್ಳೂರು ಬಳಿ ಮೈಸೂರ-ದರ್ಭಾಂಗ ಎಕ್ಸ್ ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ರೈಲು ಭೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಅದೃಷ್ಟವಶಾತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರೂ ಪ್ರಾಣಾಪಾಯದಿಂದ ರಕ್ಷಿಸಿಕೊಂಡಿದ್ದಾರೆ.

ಆದರೆ ರೈಲಿನಲ್ಲಿ ಸಂಚಿಸುತ್ತಿದ್ದ 19 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತ ನಡೆದ ಸ್ಥಳಕ್ಕೆ ಶ್ವಾನ ದಳ ಬಂದು ಯಾರಿಗಾದರೂ ಅಪಾಯವಾಗಿದೆಯೇ ಎಂದು ಪರಿಶೀಲನೆ ನಡೆಸಲಾಯಿತು.

ಇನ್ನು, ಅಪಘಾತದ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ವಿ ಸೋಮಣ್ಣ , ನಿನ್ನೆ ಒಳ್ಳೆಯ ದಿನ. ಆ ದೇವಿಯ ಕೃಪೆಯಿಂದ ಯಾರಿಗೂ ಪ್ರಾಣಾಪಾಯವಾಗಿಲ್ಲ ಎಂದರು. ಆದರೆ ಯಾವ ಕಾರಣಕ್ಕೆ ಅಪಘಾತವಾಯಿತು ಎಂಬುದನ್ನು ತನಿಖೆಯಿಂದ ಪತ್ತೆ ಹಚ್ಚಬೇಕಿದೆ. ತಕ್ಷಣವೇ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments