Webdunia - Bharat's app for daily news and videos

Install App

ಮೈಸೂರು ದಸರಾಗೆ ಇಂದಿನಿಂದ ಚಾಲನೆ: ಸಂಸದರಾದ ಮೇಲೆ ಯದುವೀರ್ ಒಡೆಯರ್ ಗೆ ಮೊದಲ ದಸರಾ

Krishnaveni K
ಗುರುವಾರ, 3 ಅಕ್ಟೋಬರ್ 2024 (09:34 IST)
Photo Credit: X
ಮೈಸೂರು: ಇಂದಿನಿಂದ ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಸಿಗಲಿದೆ. ಇಂದು ಬೆಳಿಗ್ಗೆನಿಂದಲೇ ಸಾಂಪ್ರದಾಯಿಕವಾಗಿ ದಸರಾ ಕಾರ್ಯಕ್ರಮಗಳು ಆರಂಭವಾಗಲಿದೆ. ಸಂಸದರಾದ ಮೇಲೆ ಯದುವೀರ್ ಒಡೆಯರ್ ಅವರಿಗೆ ಇದು ಮೊದಲ ದಸರಾ ಹಬ್ಬವಾಗಿದೆ.

ಇಂದು ಬೆಳಿಗ್ಗೆ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ದಸರಾಗೆ ಚಾಲನೆ ಸಿಗಲಿದೆ. ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ ಈ ಬಾರಿ ದಸರಾ ಉದ್ಘಾಟಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಈಗಾಗಲೇ ಮೈಸೂರಿಗೆ ಆಗಮಿಸಿದ್ದಾರೆ.

ಇನ್ನು, ಸಂಸದರಾದ ಬಳಿಕ ಇದೇ ಮೊದಲ ಬಾರಿಗೆ ಯದುವೀರ್ ಒಡೆಯರ್ ರಾಜಪೀಠದಲ್ಲಿ ಕುಳಿತು ದಸರಾ ಪೂಜಾ ಕಾರ್ಯಗಳನ್ನು ನೆರವೇರಿಸಲಿದ್ದಾರೆ. ಇಂದಿನಿಂದ ಖಾಸಗಿ ದರ್ಬಾರ್ ಆರಂಭವಾಗಲಿದೆ. ಯದುವೀರ್ ಅವರಿಗೆ ಕಂಕಣಧಾರಣೆ, ಸವಾರಿ ತೊಟ್ಟಿಗೆ, ಪಟ್ಟದ ಆನೆ, ಕುದುರೆ, ಹಸುಗಳು ಆಗಮಿಸಲಿವೆ. 11.35 ರ ನಂತರ ಯದುವೀರ್ ಸಿಂಹಾರೋಹಣ ನೆರವೇರಿಸಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ.

ಇಂದಿನಿಂದ 10 ದಿನಗಳ ಕಾಲ ಅದ್ಧೂರಿಯಾಗಿ ದಸರಾ ಮಹೋತ್ಸವ ನಡೆಯಲಿದ್ದು, ಅಕ್ಟೋಬರ್ 12 ರಂದು ವಿಶ್ವ ಪ್ರಸಿದ್ಧ ಜಂಬೂ ಸವಾರಿ, ಪಂಜಿನ ಕವಾಯತು ನಡೆಯಲಿದೆ. ಜೊತೆಗೆ ಅರಮನೆ ನಗರಿಯಲ್ಲಿ ಎಂದಿನಂತೆ ಯುವ ದಸರಾ ಕೂಡಾ ಕಳೆ ಕಟ್ಟಲಿದೆ. ಕೋಟ್ಯಾಂತರ ಮಂದಿ ದಸರಾದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments