ಮುಡಾ ಹಗರಣ ಬಯಲು ಮಾಡಿದ್ದ ಮೈಸೂರು ಡಿಸಿ ಕೆವಿ ರಾಜೇಂದ್ರಗೆ ವರ್ಗದ ಶಿಕ್ಷೆ

Krishnaveni K
ಶುಕ್ರವಾರ, 5 ಜುಲೈ 2024 (11:10 IST)
ಬೆಂಗಳೂರು: ಇತ್ತೀಚೆಗೆ ರಾಜಕೀಯದಲ್ಲಿ ತಲ್ಲಣ ಉಂಟು ಮಾಡಿರುವ ಮುಡಾ ಸೈಟು ಹಂಚಿಕೆ ಹಗರಣವನ್ನು ಬಯಲಿಗೆಳೆದಿದ್ದ ಮೈಸೂರು ಡಿಸಿ ಕೆವಿ ರಾಜೇಂದ್ರ ಅವರಿಗೆ ಈಗ ವರ್ಗಾವಣೆಯ ಶಿಕ್ಷೆ ಸಿಕ್ಕಿದೆ!

ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ ಸೈಟು ಹಂಚಿಕೆ ಮಾಡಿಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಈ ವಿಚಾರ ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರವುಂಟು ಮಾಡಿದೆ.

ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಈಗಾಗಲೇ ಬಿಜೆಪಿ ಹೋರಾಟ ನಡೆಸುತ್ತಿದೆ. ಆದರೆ ಇದನ್ನು ಸಿಬಿಐಗೆ ವಹಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟುಹಿಡಿದಿದ್ದಾರೆ. ಇದರಲ್ಲಿ ನನ್ನ ತಪ್ಪಿಲ್ಲ. ಮುಡಾ ತಪ್ಪು ಮಾಡಿದೆ. ಹಾಗೆ ನೋಡಿದರೆ ನಮಗೆ 62 ಕೋಟಿ ರೂ. ಪರಿಹಾರ ನೀಡಬೇಕು ಎಂದು ಸಿದ್ದರಾಮಯ್ಯ ನಿನ್ನೆ ಹೇಳಿಕೆ ನೀಡಿದ್ದರು.

ಇದರ ನಡುವೆ ಈ ಹಗರಣವನ್ನು ಬಯಲಿಗೆಳೆದ ಡಿಸಿ ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಲೋಕಸಭೆ ಚುನಾವಣೆ ಬಳಿಕ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಸರ್ಕಾರ ಆದೇಶ ನೀಡಿದ್ದು, ಆ ಪೈಕಿ ರಾಜೇಂದ್ರ ಕೂಡಾ ಸೇರಿದ್ದಾರೆ.  ಅವರನ್ನು ಈಗ ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾಯಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments