Webdunia - Bharat's app for daily news and videos

Install App

ಮುಡಾ ಹಗರಣ ಬಯಲು ಮಾಡಿದ್ದ ಮೈಸೂರು ಡಿಸಿ ಕೆವಿ ರಾಜೇಂದ್ರಗೆ ವರ್ಗದ ಶಿಕ್ಷೆ

Krishnaveni K
ಶುಕ್ರವಾರ, 5 ಜುಲೈ 2024 (11:10 IST)
ಬೆಂಗಳೂರು: ಇತ್ತೀಚೆಗೆ ರಾಜಕೀಯದಲ್ಲಿ ತಲ್ಲಣ ಉಂಟು ಮಾಡಿರುವ ಮುಡಾ ಸೈಟು ಹಂಚಿಕೆ ಹಗರಣವನ್ನು ಬಯಲಿಗೆಳೆದಿದ್ದ ಮೈಸೂರು ಡಿಸಿ ಕೆವಿ ರಾಜೇಂದ್ರ ಅವರಿಗೆ ಈಗ ವರ್ಗಾವಣೆಯ ಶಿಕ್ಷೆ ಸಿಕ್ಕಿದೆ!

ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ ಸೈಟು ಹಂಚಿಕೆ ಮಾಡಿಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಈ ವಿಚಾರ ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರವುಂಟು ಮಾಡಿದೆ.

ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಈಗಾಗಲೇ ಬಿಜೆಪಿ ಹೋರಾಟ ನಡೆಸುತ್ತಿದೆ. ಆದರೆ ಇದನ್ನು ಸಿಬಿಐಗೆ ವಹಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟುಹಿಡಿದಿದ್ದಾರೆ. ಇದರಲ್ಲಿ ನನ್ನ ತಪ್ಪಿಲ್ಲ. ಮುಡಾ ತಪ್ಪು ಮಾಡಿದೆ. ಹಾಗೆ ನೋಡಿದರೆ ನಮಗೆ 62 ಕೋಟಿ ರೂ. ಪರಿಹಾರ ನೀಡಬೇಕು ಎಂದು ಸಿದ್ದರಾಮಯ್ಯ ನಿನ್ನೆ ಹೇಳಿಕೆ ನೀಡಿದ್ದರು.

ಇದರ ನಡುವೆ ಈ ಹಗರಣವನ್ನು ಬಯಲಿಗೆಳೆದ ಡಿಸಿ ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಲೋಕಸಭೆ ಚುನಾವಣೆ ಬಳಿಕ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಸರ್ಕಾರ ಆದೇಶ ನೀಡಿದ್ದು, ಆ ಪೈಕಿ ರಾಜೇಂದ್ರ ಕೂಡಾ ಸೇರಿದ್ದಾರೆ.  ಅವರನ್ನು ಈಗ ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾಯಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments