Webdunia - Bharat's app for daily news and videos

Install App

ಮೋದಿ ಸಮಾವೇಶ ನಡೆದ ಜಾಗದಲ್ಲಿ ಪತ್ನಿ ಜೊತೆ ಇಂದು ಕಸ ತೆಗೆದ ಯದುವೀರ್ ಒಡೆಯರ್

Krishnaveni K
ಸೋಮವಾರ, 15 ಏಪ್ರಿಲ್ 2024 (13:33 IST)
Photo Courtesy: Twitter
ಮೈಸೂರು: ನಿನ್ನೆ ಪ್ರಧಾನಿ ಮೋದಿ ಭಾಗಿಯಾಗಿದ್ದ ಎನ್ ಡಿಎ ಲೋಕಸಭಾ ಪ್ರಚಾರ ಸಮಾವೇಶದಲ್ಲಿ ಸಾವಿರಾರು ಜನ ಸೇರಿದ್ದರು. ಇಂದು ಅದೇ ಜಾಗದಲ್ಲಿ ಮೈಸೂರು ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್ ಒಡೆಯರ್ ಕಸ ತೆಗೆದು ಸ್ವಚ್ಛತೆ ಕೆಲಸ ಮಾಡಿದ್ದಾರೆ.

ನಿನ್ನೆ ಸಂಜೆ ಮೋದಿ ಇಲ್ಲಿ ಸಮಾವೇಶದಲ್ಲಿ ಭಾಗಿಯಾಗಿ ಸಾವಿರಾರು ಜನರನ್ನುದ್ದೇಶಿಸಿ ಮಾತನಾಡಿದ್ದರು. ಈ ವೇಳೆ ವೇದಿಕೆಯಲ್ಲಿ ಜೆಡಿಎಸ್ ನಾಯಕರಾದ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಕೂಡಾ ಭಾಗಿಯಾಗಿದ್ದರು. ಈ ವೇಳೆ ನಾನು ಎಸಿಯಲ್ಲಿ ಕೂತಿರುವವನು ಎಂದು ಟೀಕಿಸುತ್ತಾರೆ. ಆದರೆ ನಾನೂ ನಿಮ್ಮ ಬಳಿ ಬರುತ್ತೇನೆ. ನಿಮ್ಮವನಲ್ಲಿ ಒಬ್ಬನಾಗಲು ಬಯಸುತ್ತೇನೆ ಎಂದಿದ್ದರು.

ಇದು ಕೇವಲ ಭಾಷಣಕ್ಕೆ ಸೀಮಿತವಾಗಿಲ್ಲ. ಇಂದು ಬೆಳಿಗ್ಗೆಯೇ ತಮ್ಮ ಪತ್ನಿ ತ್ರಿಷಿಕಾ ಮತ್ತು ಸಂಗಡಿಗರ ಜೊತೆ ನಿನ್ನೆ ಸಮಾವೇಶ ನಡೆದ ಜಾಗಕ್ಕೆ ಬಂದ ಯದುವೀರ್ ಒಡೆಯರ್ ಕೈಗೆ ಗ್ಲೌಸ್ ಹಾಕಿಕೊಂಡು ಸಾಮಾನ್ಯರಂತೇ ಕಸ ಹೆಕ್ಕಿ ಸ್ವಚ್ಛತಾ ಕೆಲಸ ಮಾಡಿದ್ದಾರೆ. ಆ ಮೂಲಕ ರಾಜವಂಶಸ್ಥನಾದರೂ ತಾನು ಯಾವ ಕೆಲಸಕ್ಕೂ ಸೈ ಎಂದು ತೋರಿಸಿಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments