Webdunia - Bharat's app for daily news and videos

Install App

Mysore: ಮೈಸೂರು ಪ್ರವಾಸ ಮಾಡುವವರಿಗೆ ಶಾಕ್ ಕೊಟ್ಟ ಎಂಟ್ರಿ ಫೀಸ್

Krishnaveni K
ಶುಕ್ರವಾರ, 13 ಜೂನ್ 2025 (08:50 IST)
Photo Credit: X
ಮೈಸೂರು: ಶಾಲಾ ಶೈಕ್ಷಣಿಕ ಪ್ರವಾಸ ಇಲ್ಲವೇ ಕುಟುಂಬ ಸಮೇತರಾಗಿ ವೀಕೆಂಡ್ ನಲ್ಲಿ ಒಮ್ಮೆ ಮೈಸೂರು ನೋಡಿ ಬರೋಣವೆಂದು ಹೋದರೆ ಈಗ ನಿಮಗೆ ಎಂಟ್ರಿ ಫೀಸ್ ಕೇಳಿಯೇ ಶಾಕ್ ಆಗಬಹುದು.

ಮೈಸೂರು ಪ್ರವಾಸ ಮಾಡುವವರು ಕೆಆರ್ ಎಸ್ ಡ್ಯಾಮ್ ಗೆ ಭೇಟಿ ಕೊಟ್ಟೇ ಕೊಡುತ್ತಾರೆ. ಮೈಸೂರಿನ ಪ್ರಮುಖ ಆಕರ್ಷಣೆಯೇ ಇದು. ಅದರಲ್ಲೂ ಸಂಜೆ ವೇಳೆ ವರ್ಣಾಲಂಕೃತ ದೀಪದಲ್ಲಿ ಕಾರಂಜಿ ನೋಡುವುದೇ ಒಂದು ಖುಷಿ.

ಆದರೆ ಈಗ ಮೈಸೂರಿನಲ್ಲಿ ಕೆಆರ್ ಎಸ್ ಬೃಂದಾವನ ಉದ್ಯಾನ ನೋಡಲು ಹೋಗಬೇಕಾದರೆ ಎಂಟ್ರಿ ಶುಲ್ಕ ದುಪ್ಪಟ್ಟು ಕೊಡಬೇಕು. ಸರ್ಕಾರ ಇದ್ದಕ್ಕಿದ್ದಂತೆ ಪ್ರವೇಶ ಶುಲ್ಕವನ್ನು ಏರಿಕೆ ಮಾಡಿದೆ. ಇದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಇದುವರೆಗೆ ಪ್ರವೇಶ ಶುಲ್ಕ ವಯಸ್ಕರಿಗೆ 50 ರೂ. ಮಕ್ಕಳಿಗೆ 10 ರೂ. ಎಂದಿತ್ತು. ಆದರೆ ಈಗ ಏಕಾಏಕಿ ದುಪ್ಪಟ್ಟು ಮಾಡಲಾಗಿದೆ. ಅಂದರೆ ವಯಸ್ಕರಿಗೆ 100 ರೂ., ಮಕ್ಕಳಿಗೆ 50 ರೂ. ಎಂಟ್ರಿ ಫೀಸ್ ಆಗಿದೆ. ಸರ್ಕಾರ ಸದ್ದಿಲ್ಲದೇ ಫೀಸ್ ಹೆಚ್ಚಳ ಮಾಡಿದ್ದು, ಆ ಮೂಲಕ ತನ್ನ ಖಜಾನೆ ತುಂಬಿಸಲು ಮಾರ್ಗವೊಂದನ್ನು ಕಂಡುಕೊಂಡಿದೆ ಎಂದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಶುಲ್ಕ ಹೆಚ್ಚಿಸಿರುವುದು ತಪ್ಪಲ್ಲ. ಆದರೆ ಏಕಾಏಕಿ ದುಪ್ಪಟ್ಟು ಹೆಚ್ಚಿಸಿರುವುದಕ್ಕೆ ಪ್ರವಾಸಿಗರಿಂದ ವಿರೋಧ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಎರಡು ಜಿಲ್ಲೆಗಳಿಗೆ ಮಾತ್ರ ಭಾರೀ ಮಳೆ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಮುಂದಿನ ಸುದ್ದಿ
Show comments