Webdunia - Bharat's app for daily news and videos

Install App

ಪಕ್ಕದ್ಮನೆ ಪ್ರಿಯಕರ ಜೊತೆಗೂಡಿ ಮರ್ಮಾಂಗಕ್ಕೆ ಹೊಡೆದು ಪತಿ ಕೊಂದ ಪತ್ನಿ!

Webdunia
ಸೋಮವಾರ, 19 ಜುಲೈ 2021 (17:48 IST)
ಕಾಫಿಯಲ್ಲಿ ಬೆರೆಸಿದ್ದ ನಿದ್ದೆ ಮಾತ್ರೆ ಸೇವಿಸಿ ನಿದ್ದೆಗೆ ಜಾರಿದ ಪತಿಯ ಮರ್ಮಾಂಗದ ಮೇಲೆ ಹಲ್ಲೆ ಮಾಡಿ ಕೊಂದ ಪ್ರಕರಣವನ್ನು 9 ತಿಂಗಳ ನಂತರ ಭೇದಿಸಿದ ಮೈಸೂರು ಜಿಲ್ಲೆಯ ಬನ್ನೂರು ಪೊಲೀಸರು ಪ್ರಿಯಕರ ಹಾಗೂ ಪತ್ನಿಯನ್ನು ಬಂಧಿಸಿದ್ದಾರೆ.
ಪತ್ನಿ ಉಮಾ (29) ಹಾಗೂ ಪ್ರಿಯಕರ ಅವಿನಾಶ್ ಬಂಧಿತ ಆರೋಪಿಗಳು. ಮಂಡ್ಯ ಜಿಲ್ಲೆ ಹೊನಗಾನಹಳ್ಳಿ ಗ್ರಾಮದ ನಿವಾಸಿ ವೆಂಕಟರಾಜು (50) ಕೊಲೆಯಾದ ದುರ್ದೈವಿ.

ಅಕ್ಟೋಬರ್ 2020ರಂದು ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಹುಣಸಗಳ್ಳಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣದ ಬೆನ್ನು ಬಿದ್ದ ಪೊಲೀಸರು ಕೊಲೆಯ ಹಿಂದಿನ ಅಸಲಿಯತ್ತು ತಿಳಿದು ಬೆಚ್ಚಿಬಿದ್ದಿದ್ದಾರೆ.
ವೆಂಕಟರಾಜು 10 ವರ್ಷದ ಹಿಂದೆ ಶ್ರೀರಂಗಪಟ್ಟಣ ತಾಲ್ಲೂಕಿನ ಬಳ್ಳೆಕರೆ ಗ್ರಾಮದ ನಿವಾಸಿ ಉಮಾಳನ್ನು ಮದುವೆಯಾಗಿದ್ದು, 8 ವರ್ಷದ ಒಂದು ಹೆಣ್ಣು ಮಗು 6 ವರ್ಷದ ಗಂಡು ಮಗುವಿದೆ. ವಯಸ್ಸಿನ ಅಂತರ ಹೆಚ್ಚಾಗಿ ಇದ್ದಿದ್ದರಿಂದ ಇಬ್ಬರ ನಡುವೆ ಪದೇಪದೆ ಜಗಳ ನಡೆಯುತ್ತಿತ್ತು.
ಈ ವೇಳೆ ಉಮಾಗೆ ಪಕ್ಕದ ಮನೆಯ ನಿವಾಸಿ ಪರಿಚಯವಾಗಿದ್ದ ಅವಿನಾಶ್ ಪರಿಚಯವಾಗಿದ್ದ. ಇಬ್ಬರ ನಡುವೆ ಸಲುಗೆ ಬೆಳೆದಿದ್ದು, ಇಬ್ಬರು ಸೇರಿ ವೆಂಕಟರಾಜು ಕೊಲೆ ಮಾಡಲು ನಿರ್ಧರಿಸಿದ್ದಾರೆ.
ಅವಿನಾಶ್ ತನ್ನ ಅಜ್ಜಿ‌ ಮನೆ ಹುಣಸಗಳ್ಳಿಗೆ ವೆಂಕಟರಾಜುನನ್ನು ಕರೆಸಿಕೊಂಡಿದ್ದು, ಕಾಫಿಯಲ್ಲಿ ನಿದ್ದೆ ಮಾತ್ರೆ ಬೆರೆಸಿ ಕುಡಿಸಿದ್ದು, ನಿದ್ರಾವಸ್ಥೆಯಲ್ಲಿದ್ದಾಗ ಖಾಸಗಿ ಭಾಗಕ್ಕೆ ಹಲ್ಲೆ ಮಾಡಿದ್ದಾರೆ. ಅಲ್ಲದೇ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ಸ್ವಾಭಾವಿಕ ಸಾವು ಎಂಬಂತೆ ಪತ್ನಿ ಉಮಾ ನಾಟಕವಾಡಿದ್ದಳು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments