Publish Date: Fri, 10 Aug 2018 (10:21 IST)
Updated Date: Fri, 10 Aug 2018 (10:23 IST)
ಬೆಂಗಳೂರು: ಕೇರಳ, ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಕಪಿಲಾ ನದಿ ಉಕ್ಕಿ ಹರಿಯುತ್ತಿದ್ದು, ಮೈಸೂರು-ಊಟಿ ಹೆದ್ದಾರಿಯಲ್ಲೂ ನೀರು ತುಂಬಿದೆ. ಇದರಿಂದಾಗಿ ಊಟಿಗೆ ಹೋಗುವ ವಾಹನ ಸಂಚಾರ ಬಂದ್ ಆಗಿದೆ. ಹೀಗಾಗಿ ಮೈಸೂರು ಮಾರ್ಗವಾಗಿ ಊಟಿಗೆ ಹೋಗುವ ಯೋಜನೆ ಹಾಕಿಕೊಂಡಿದ್ದರೆ ಕೈ ಬಿಡುವುದು ಒಳ್ಳೆಯದು. ಊಟಿಗೆ ಹೋಗಲು ಬದಲಿ ಮಾರ್ಗ ವ್ಯವಸ್ಥೆ ಮಾಡಲಾಗುತ್ತಿದೆ.
ಕೇರಳದಲ್ಲೂ ಭಾರೀ ಮಳೆಯಾಗುತ್ತಿದ್ದು, 20 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಸಂಕಷ್ಟಕ್ಕೀಡಾಗಿರುವ ಕೇರಳದ ಸಹಾಯಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಕೇರಳ ಹಾಗೂ ದಕ್ಷಿಣ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಬೆಂಗಳೂರಿನಲ್ಲೂ ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣವಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.