Webdunia - Bharat's app for daily news and videos

Install App

ಮೈಸೂರ್‌ ಸ್ಟಾಂಡಲ್ ಸೋಪ್ ಕಾರ್ಖಾನೆಯಲ್ಲಿಯೇ ಲಕ್ಷಾಂತರ ಮೌಲ್ಯದ ಗಂಧ ಕಳ್ಳತನ

Webdunia
ಗುರುವಾರ, 7 ಜುಲೈ 2016 (19:47 IST)
ಕಾಡಿಗೆ ನುಗ್ಗಿ ಗಂಧದ ಮರಗಳನ್ನು ಕದಿಯುತ್ತಿದ್ದವರು, ಇದೀಗ ಗಂಧದ ಮರಗಳನ್ನು ಬಳಕೆ ಮಾಡಿಕೊಳ್ಳುವ ಮೈಸೂರ್ ಸ್ಯಾಂಡಲ್ ಸೋಪ್ ಕಾರ್ಖಾನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಗಂಧದ ಮರಗಳನ್ನು ತುಂಡರಿಸಿ ಅವುಗಳನ್ನು ತೆಗೆದುಕೊಂಡು ಕಾಲು ಕಿತ್ತಿದ್ದಾರೆ.
 
ನಗರದ ಸುಬ್ರಹ್ಮಣ್ಯಂ ನಗರದಲ್ಲಿರುವ ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆಗೆ ನುಗ್ಗಿದ ಕಳ್ಳರು, ಕಾರ್ಖಾನೆಯಲ್ಲಿದ್ದ ಗಂಧದ ಮರಗಳನ್ನು ಗರಗಸದಿಂದ ಕತ್ತರಿಸಿ ಗಂಧದ ತುಂಡುಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.  
 
ಕಾರ್ಖಾನೆಯ ಭದ್ರತಾ ಸಿಬ್ಬಂದಿಗಳ ಹೇಳಿಕೆಗಳು ಕೂಡಾ ಅನುಮಾನಾಸ್ಪದವಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ ಎನ್ನಲಾಗಿದೆ.
 
ಭದ್ರತಾ ಸಿಬ್ಬಂದಿಯೊಬ್ಬರು ಶೌಚಾಲಯಕ್ಕೆ ಹೋದಾಗ ಕಳ್ಳತನ ನಡೆದಿರಬಹುದು ಎಂದು ಹೇಳಿಕೆ ನೀಡಿದ್ದಾನೆ. ಆದರೆ,ಗಂಧದ ಮರಗಳನ್ನು ಕತ್ತರಿಸಿ ಅವುಗಳನ್ನು ವಾಹನದಲ್ಲಿ ಹಾಕಿಕೊಂಡು ಹೋಗಲು ಗಂಟೆಗಳ ಸಮಯಾವಕಾಶ ಬೇಕಾಗುತ್ತದೆ. ಭದ್ರತಾ ಸಿಬ್ಬಂದಿ ಕೂಡಾ ಕಳ್ಳರೊಂದಿಗೆ ಶಾಮೀಲಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಮಾಂಗಲ್ಯ ಸರ ತೆಗೆಯಲು ಬಂದ ವೃದ್ಧ ದಂಪತಿ: ನೆಟ್ಟಿಗರ ಮನಗೆದ್ದ ಅಂಗಡಿ ಮಾಲಿಕ

ಕೆಲಸದ ಅವಧಿ ಹೆಚ್ಚಳ: 10 ಗಂಟೆ ಕೆಲಸ ಮಾಡಿ ಅಂದ್ರೆ ಫ್ಯಾಮಿಲಿ ಏನು ಮಾಡ್ಬೇಕು

Karnataka Weather: ವಾಯುಭಾರ ಕುಸಿತದಿಂದ ಭಾರೀ ಮಳೆ ನಿರೀಕ್ಷೆ, ಯಾವಾಗ ಎಲ್ಲಿ ಇಲ್ಲಿದೆ ವಿವರ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಮುಂದಿನ ಸುದ್ದಿ
Show comments