ಮೈಸೂರು ಗಲಭೆಕೋರರು ಅಮಾಯಕರು, ಕೆಲವೇ ಮಂದಿ ಎಂದವರಿಗೆ ಠಕ್ಕರ್ ನೀಡಿದಂತಿದೆ ಈ ವರದಿ

Krishnaveni K
ಶನಿವಾರ, 15 ಫೆಬ್ರವರಿ 2025 (11:12 IST)
ಮೈಸೂರು: ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಪೊಲೀಸ್ ಠಾಣೆ ಮೇಲಿನ ದಾಳಿಗೆ ಸಂಬಂಧಿಸಿದಂತೆ ಕೆಲವು ರಾಜಕೀಯ ನಾಯಕರು ಅಮಾಯಕರು, ಕೆಲವೇ ಮಂದಿ ದಾಳಿ ನಡೆಸಿದ್ದು ಎಂದೆಲ್ಲಾ ತಿಪ್ಪೇ ಸಾರುವ ಪ್ರಯತ್ನ ನಡೆಸಿದ್ದರು. ಆದರೆ ಈ ವರದಿ ಅದನ್ನು ಸುಳ್ಳು ಮಾಡುತ್ತಿದೆ.

ಮೈಸೂರು ಉದಯಗಿರಿ ಪೊಲೀಸ್ ಠಾಣೆ ಮುಂದೆ ಮೊನ್ನೆ ಕೆಲವೇ ಮಂದಿ ಅಲ್ಲ ಸಾವಿರ ಸಂಖ್ಯೆಯಲ್ಲಿ ಯುವಕರ ಗುಂಪು ಗಲಾಟೆ ಎಬ್ಬಿಸಲು ಸೇರಿತ್ತು ಎಂಬುದಕ್ಕೆ ಸಾಕ್ಷ್ಯವೆಂಬಂತೆ ಕೆಲವು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಎಫ್ಐಆರ್ ನಲ್ಲೂ ಗಲಾಟೆಯ ತೀವ್ರತೆ ಉಲ್ಲೇಖಿಸಲಾಗಿದೆ. ಅಂದು ಸ್ವಲ್ಪವೇ ಮೈಮರೆತಿದ್ದರೂ ಪೊಲೀಸರ ಹೆಣ ಬೀಳುತ್ತಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದೇ ಕಾರಣಕ್ಕೇ ಘಟನೆಗೆ ಸಂಬಂಧಿಸಿದಂತೆ ನೂರಾರು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಒಂದು ವಿಡಿಯೋದಿಂದ ಪ್ರಚೋದಿತರಾಗಿ ಅಲ್ಲಿ ಸೇರಿದ್ದವರಿಗೆ ನಿಜವಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ನಲ್ಲಿ ಏನಿತ್ತು ಎಂಬುದೇ ಸರಿಯಾಗಿ ಮಾಹಿತಿಯಿತ್ತೋ ಇಲ್ವೋ ಗೊತ್ತಿಲ್ಲ. ಆದರೆ ಅಂದು ಗಲಾಟೆ ನಡೆಯುವಾಗ ಸಾಕಷ್ಟು ಸಂಖ್ಯೆಯಲ್ಲಿ ಜನರಿದ್ದ ವಿಡಿಯೋಗಳು ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ನಮಗೂ ಬೇಕು ಸ್ವಾತಂತ್ರ್ಯ: ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ನಾಯಿ ಪ್ರಿಯರ ಹೊಸ ಟ್ರೆಂಡ್

ರೈತರು ಪ್ರತಿಭಟನೆ ಮಾಡುತ್ತಿದ್ದರೆ ಕೇಂದ್ರ ಏನು ಕಳ್ಳೆಕಾಯಿ ತಿನ್ನುತ್ತಿದ್ಯಾ: ಕೃಷ್ಣ ಭೈರೇಗೌಡ ಕಿಡಿ

ರೈತರ ಪ್ರತಿಭಟನೆ ನಡುವೆ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಎಲ್ಲಿ ಹೋದ್ರು

Karnataka Weather: ಈ ವಾರಂತ್ಯಕ್ಕೆ ಮಳೆಯ ಸೂಚನೆಯಿದೆಯಾ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments