ವಿಶ್ವವಿಖ್ಯಾತ ಮೈಸೂರು ದಸರಾ: ಅರ್ಜುನ ತಂಡಕ್ಕೆ ಭಾರ ಹೊರುವ ತಾಲೀಮು ಶುರು

Webdunia
ಶನಿವಾರ, 2 ಸೆಪ್ಟಂಬರ್ 2017 (12:27 IST)
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈ ಹಿನ್ನೆಲೆಯಲ್ಲಿ ಗಜಪಡೆಗಳಿಗೆ ತಾಲೀಮು ಜೋರಾಗಿ ನಡೆಯುತ್ತಿದೆ.

ಮೊದಲ ತಂಡದಲ್ಲಿ ಬಂದ ಅರ್ಜುನ ನೇತೃತ್ವದ 7 ಆನೆಗಳು ಸೇರಿ 15 ಆನೆಗಳಿಗೆ ನಿನ್ನೆಯಿಂದ ಭಾರ ಹೊರುವ ತಾಲೀಮು ಶುರುವಾಗಿದೆ. ಗಜಪಡೆಯ ಕ್ಯಾಪ್ಟನ್ ಅರ್ಜುನನಿಗೆ ಸುಮಾರು 400 ಕೆಜಿ ಭಾರ ಹೊತ್ತು ಸಾಗಿದ.

ಭಾರ ಹೊತ್ತ ಅರ್ಜುನ ಎರಡನೇ ತಾಲೀಮು ಆರಂಭಿಸಿದ. ಅರ್ಜುನನಿಗೆ ಕುಮ್ಕಿ ಆನೆಗಳಾದ ವರಲಕ್ಷ್ಮಿ ಹಾಗೂ ಕಾವೇರಿ ಸಾಥ್ ನೀಡಿದರು. ಗಾಂಭೀರ್ಯದಿಂದ ಹೆಜ್ಜೆ ಹಾಕಿದ ಅರ್ಜುನ ಮತ್ತು ತಂಡ ಸಾಲಾಗಿ ನಗರದಲ್ಲಿ ಹೆಜ್ಜೆ ಹಾಕುತ್ತಿದ್ದ ದೃಶ್ಯ ಮನಮೋಹಕವಾಗಿತ್ತು.

ಅರ್ಜುನನ ಬೆನ್ನಮೇಲೆ ಗಾದಿ ಮತ್ತು ನಮ್ದ ಇಟ್ಟು ತೊಟ್ಟಿಲು ಕಟ್ಟಿ, ಅದರಲ್ಲಿ ಸುಮಾರು 400 ಕೆಜಿಯಷ್ಟು ಮರಳು ಮೂಟೆಗಳನ್ನ ಹಾಕಿ ನಗರದಲ್ಲಿ ತಾಲೀಮು ಆರಂಭಿಸಲಾಗಿದೆ. ಅರ್ಜುನ , ಬಲರಾಮ, ಅಭಿಮನ್ಯು, ಗಜೇಂದ್ರನಿಗೆ ಈ ಬಾರಿ ಭಾರ ಹೊರುವ ತಾಲೀಮು ನೀಡಲಾಗ್ತಿದೆ. 15 ದಿನದ ಬಳಿಕ 750 ಕೆಜಿ ತೂಕದ ಮರದ ಅಂಬಾರಿ ಹೊರುವ ತಾಲೀಮು ಶುರುವಾಗಲಿದೆ. ಈ ಬಾರಿ 2 ಹೊಸ ಆನೆಗಳು ಸೇರ್ಪಡೆಯಾಗಿದ್ದು, ಎಲ್ಲಾ ಆನೆಗಳು ಸಹ ಸೌಮ್ಯವಾಗಿ ವರ್ತಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವರ ಕುರ್ಚಿ ಕಾಳಗದಲ್ಲಿ ಕರ್ನಾಟಕದ ಉದ್ಯೋಗ ಆಂಧ್ರ ಪಾಲಾಗಿದೆ: ಛಲವಾದಿ ನಾರಾಯಣಸ್ವಾಮಿ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಮುಂದಿನ ಸುದ್ದಿ
Show comments