ತೆಲಂಗಾಣದ ಬೆನ್ನಲ್ಲೇ ರಾಯಚೂರಿನಲ್ಲೂ ಪಕ್ಷಿಗಳ ಸಾವು: ಆತಂಕದಲ್ಲಿ ಕುಕ್ಕುಟೋದ್ಯಮ

Sampriya
ಗುರುವಾರ, 27 ಫೆಬ್ರವರಿ 2025 (15:48 IST)
Photo Courtesy X
ರಾಯಚೂರು: ತೆಲಂಗಾಣದ ಬೆನ್ನಲ್ಲೆ ಕರ್ನಾಟಕದ ರಾಯಚೂರಿನಲ್ಲಿ ಪಕ್ಷಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿ ಜ್ವರ ಹರಡಿರುವ ಶಂಕೆ ವ್ಯಕ್ತವಾಗಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಹಕ್ಕಿ ಜ್ವರ ಪತ್ತೆಯಾಗಿತ್ತು.

ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪ್ರತೀ ದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್‌ ಫಿಶರ್‌, ಸುವರ್ಣಪಕ್ಷಿ ಸೇರಿದಂತೆ ವಿವಿಧ ಜಾತಿಯ ವಲಸೆ ಪಕ್ಷಿಗಳು ಸಾವನ್ನಪ್ಪುತ್ತಿದೆ. ಹೀಗಾಗಿ ಕುಕ್ಕುಟೋದ್ಯಮವನ್ನು ನಂಬಿರುವ ನೂರಾರು ಮಂದಿ ಆತಂಕಗೊಂಡಿದ್ದಾರೆ.

ಐದಾರು ದಿನಗಳಿಂದಲೂ ಮಾನ್ವಿ ಪಟ್ಟಣ, ರಬಣಕಲ್‌ ಸೇರಿದಂತೆ ಹಲವೆಡೆ ಪಕ್ಷಗಳು ಇದ್ದಕ್ಕಿದ್ದಂತೆ ಮರದ ಮೇಲಿಂದ ಬಿದ್ದು, ಸಾವನ್ನಪ್ಪುತ್ತಿವೆ. ಇದು ಹಕ್ಕಿ ಜ್ವರ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ರಾಯಚೂರಿನ ಮಕ್ಸೂದ್ ಅಲಿ ಎಂಬುವವರ ತೋಟದಲ್ಲಿ ಪ್ರತಿದಿನ 8-10 ಪಕ್ಷಿಗಳು ಸಾವನ್ನಪ್ಪುತ್ತಿವೆ. ಕಳೆದ ನಾಲ್ಕೈದು ದಿನಗಳಿಂದ ಮಾನ್ವಿ ಪಟ್ಟಣ, ರಬಣಕಲ್ ಸೇರಿ ಹಲವೆಡೆ ಪಕ್ಷಿಗಳು ಮರದ ಮೇಲಿನಿಂದ ಏಕಾಏಕಿ ಕೆಳಗೆ ಬಿದ್ದು ಸಾಯುತ್ತಿವೆ.  

ಮರದಿಂದ ಬಿದ್ದು ಅಸ್ವಸ್ಥಗೊಂಡ ಪಕ್ಷಿಗಳಿಗೆ ಪಶುವೈದ್ಯಾಧಿಕಾರಿಗಳು ಚುಚ್ಚುಮದ್ದು ನೀಡಿದ್ದಾರೆ. ಮೃತ ಪಕ್ಷಿಗಳ ಕಳೆಬರವನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

ಮುಂದಿನ ಸುದ್ದಿ
Show comments