ಚಾಮುಂಡಿ ಬೆಟ್ಟಕ್ಕೆ ಬರುವ ವಿಐಪಿಗಳಿಗೂ ಖಡಕ್ ರೂಲ್ಸ್: ಸಾರ್ವಜನಿಕರು ಫುಲ್ ಖುಷ್

Krishnaveni K
ಗುರುವಾರ, 26 ಜೂನ್ 2025 (15:04 IST)
ಮೈಸೂರು: ಆಷಾಢ ಶುಕ್ರವಾರ ಹಿನ್ನಲೆಯಲ್ಲಿ ನಾಳೆಯಿಂದ ಚಾಮುಂಡಿ ಬೆಟ್ಟಕ್ಕೆ ಅಮ್ಮನವರ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗಲಿದೆ. ನಾಡದೇವತೆಯ ದರ್ಶನಕ್ಕೆ ಬರುವ ವಿಐಪಿಗಳಿಗೂ ಈಗ ಜಿಲ್ಲಾಡಳಿತ ಖಡಕ್ ರೂಲ್ಸ್ ಜಾರಿಗೊಳಿಸಿದೆ.

ಇಷ್ಟು ದಿನ ಆಷಾಢ ಪೂಜೆಗೆಂದು ಅಮ್ಮನವರ ದರ್ಶನಕ್ಕೆ ಬಂದರೆ ಸಾಮಾನ್ಯ ಭಕ್ತರು ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ಕಾಲು ನೋಯಿಸಿಕೊಂಡು ಕೊನೆಗೆ ಅರೆಕ್ಷಣ ದೇವಿಯ ದರ್ಶನ ಪಡೆಯುವಷ್ಟರಲ್ಲಿ ತಳ್ಳಿ ಬಿಡುತ್ತಿದ್ದರು. ಆದರೆ ವಿಐಪಿಗಳೆನಿಸಿಕೊಂಡವರು ಮಾತ್ರ ಜಮ್ ಅಂತ ಕಾರಿನಲ್ಲಿ ಬಂದು ಸೀದಾ ಒಳಗೆ ಹೋಗಿ ದೇವಿಯ ಮುಂದೆಯೇ ಸಾವಕಾಶವಾಗಿ ನಿಂತು ಪ್ರಾರ್ಥನೆ ಮಾಡಿಕೊಂಡು ತೆರಳುತ್ತಿದ್ದರು.

ವಿಐಪಿಗಳು ಬಂದಾಗ ಕೆಲವು ಹೊತ್ತು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅಡೆತಡೆಯಾಗುತ್ತಿತ್ತು. ಇದರಿಂದ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಆದರೆ ಈ ಬಾರಿ ಈ ರೀತಿ ಸಮಸ್ಯೆಯಾಗದಿರಲು ಜಿಲ್ಲಾಡಳಿತ ನಿಯಮ ರೂಪಿಸಿದೆ.

ವಿಐಪಿಗಳು ಇನ್ನು ಮುಂದೆ ಯಾವಾಗಲೆಂದರೆ ಆಗ ಬಂದು ದೇವಿಯ ದರ್ಶನ ಪಡೆಯಲು ಬರುವಂತಿಲ್ಲ. ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯೊಳಗೆ ಬಂದರೆ ಮಾತ್ರ ವಿಐಪಿಗಳಿಗೆ ಸೀದಾ ಹೋಗಿ ದೇವಿಯ ದರ್ಶನ ಪಡೆದು ಬರಬಹುದು. ಉಳಿದ ಸಮಯದಲ್ಲಿ ಬಂದರೆ ವಿಐಪಿ ದರ್ಶನ ಸಿಗಲ್ಲ. ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ವಿಐಪಿ ದರ್ಶನಕ್ಕೆ ಈ ಬಾರಿ ಸಮಯ ನಿಗದಿಪಡಿಸಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಇದಕ್ಕೆ ಸಾರ್ವಜನಿಕರಿಂದಲೂ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments