Webdunia - Bharat's app for daily news and videos

Install App

ಅರಸೀಕೆರೆ ಶಾಸಕ ಶಿವಲಿಂಗೇಗೌಡ ವಿರುದ್ಧ ದೂರು ದಾಖಲಿಸಿದ ಎನ್ ರಮೇಶ್

Webdunia
ಮಂಗಳವಾರ, 28 ಮಾರ್ಚ್ 2023 (20:25 IST)
ಅರಸೀಕೆರೆ ಶಾಸಕ ಶಿವಲಿಂಗೇಗೌಡ ವಿರುದ್ಧ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ಎರಡು ದೂರುಗಳನ್ನ ನೀಡಿದ್ದಾರೆ‌. ಸರ್ಕಾರದ ಎರಡು ಮಹತ್ವದ ಯೋಜನೆಗಳ ಹೆಸರಿನಲ್ಲಿ ಸುಮಾರು 250 ಕೋಟಿಯಷ್ಟು ಅಕ್ರಮವೆಸಗಿರುವ ಆರೋಪದಡಿ ಕೆಲ ದಾಖಲೆಗಳ ಸಹಿತ ಶಿವಲಿಂಗೇಗೌಡ ವಿರುದ್ಧ ಎನ್.ಆರ್.ರಮೇಶ್ ದೂರು ಸಲ್ಲಿಸಿದ್ದಾರೆ.ಎತ್ತಿನ ಹೊಳೆ ಹಾಗೂ ನರೇಗಾ ಯೋಜನೆಯಲ್ಲಿ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದಡಿ ಶಾಸಕರು, ಅಧಿಕಾರಿಗಳ ಸಹಿತ ಒಟ್ಟು 15 ಜನರ ವಿರುದ್ಧ ದೂರು ದಾಖಲಾಗಿದೆ.
 
ಎತ್ತಿನ ಹೊಳೆ ಯೋಜನೆಯು ಚೆಕ್ ಡ್ಯಾಂಗಳನ್ನು ನಿರ್ಮಿಸುವುದು, ಆಯಾ ಪ್ರದೇಶಗಳಲ್ಲಿರುವ ಕೆರೆ/ಹೊಳೆಗಳ ಹೂಳೆತ್ತುವುದು ಹಾಗೂ ಅವುಗಳ ಸುತ್ತಮುತ್ತಲ ಪ್ರದೇಶಗಳಿಗೆ ಕೊಳವೆ ಮಾರ್ಗಗಳನ್ನು ಮತ್ತು ರಸ್ತೆಗಳನ್ನು ನಿರ್ಮಿಸುವುದಾಗಿತ್ತು. ಆದರೆ ಶಾಸಕ ಶಿವಲಿಂಗೇಗೌಡರವರು ಭ್ರಷ್ಟ ಅಧಿಕಾರಿಗಳೊಂದಿಗೆ ಶಾಮೀಲಾಗಿ ಬೃಹತ್ ಪ್ರಮಾಣದ ಅಕ್ರಮಗಳನ್ನು ಎಸಗಿದ್ದಾರೆ.150ಕೋಟಿ ರೂಗಳಿಗೂ ಹೆಚ್ಚು ಹಣ ದುರ್ಬಳಕೆ ಮಾಡಲಾಗಿದೆ.ಕಳೆದ ಮೂರು ವರ್ಷದಲ್ಲಿ ಎತ್ತಿನ‌ಹೊಳೆ ಯೋಜನೆಯಲ್ಲಿ ಎಸ್.ಸಿ, ಎಸ್.ಟಿ ಸಮುದಾಯದ ಜನರಿಗೆ ಈ ಯೋಜನೆ ಅನ್ವಯವಾಗಿತ್ತು. ಜನರಲ್ ಕೆಟಕೆಗೇರಿಯಲ್ಲಿ ಟೆಂಡರ್ ಕರೆಯದೆ ತಮಗೆ ಬೇಕಾದವರಿಗೆ ಟೆಂಡರ್ ಕೊಟ್ಟು, 75% ಕಾಮಗಾರಿ ಮಾಡದೇ ಹಣವನ್ನು ನುಂಗಿದ್ದಾರೆ  ಎಂದು ಆರೋಪಿಸಲಾಗಿದೆ. ಅಲ್ದೆ 
ಕಳೆದ ಐದು ವರ್ಷಗಳಲ್ಲಿ (ನರೇಗಾ) ಯೋಜನೆಯ ಅನುಷ್ಠಾನಕ್ಕೆಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಮೂಲಕ ಬಿಡುಗಡೆಯಾಗಿರುವ 150 ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಅನುದಾನಗಳ ಪೈಕಿ, ಶೇ. 50% ಕ್ಕೂ ಹೆಚ್ಚು ಹಣವನ್ನು ಶಾಸಕ ಶಿವಲಿಂಗೇಗೌಡರು ತಮ್ಮ ಆಪ್ತ ಮತ್ತು ವಂಚಕ ಅಧಿಕಾರಿಗಳ ಸಹಕಾರದಿಂದ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ಎನ್.ಆರ್.ರಮೇಶ್, ಶಾಸಕರಿಗೆ ಹಾಗೂ ಅಧಿಕಾರಿಗಳಿಗೆ ಎಷ್ಟು ಹಣ ಕೊಟ್ಟಿದಾರೆ ಎಂದು ಉಲ್ಲೇಖಿಸಿರುವ AEE ರಘುನಾಥ್ ಎಂಬುವವರ ಡೈರಿಯ ಸಾಕ್ಷ್ಯಾಧಾರಗಳನ್ನ ಲೋಕಾಯುಕ್ತಕ್ಕೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಳೇ ಗರ್ಲ್ ಫ್ರೆಂಡ್ ಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಮರ್ಮಾಂಗಕ್ಕೆ ಥಳಿಸಿ ಹಲ್ಲೆ

Karnataka Weather: ಈ ವಾರ ರಾಜ್ಯದಲ್ಲಿ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಿರಲಿದೆ ನೋಡಿ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಮುಂದಿನ ಸುದ್ದಿ
Show comments