Webdunia - Bharat's app for daily news and videos

Install App

ನಡಹಳ್ಳಿ ಹೇಳಿಕೆಯಿಂದ ವಿಧಾನಸಭೆ ರಣರಂಗ

Webdunia
ಬುಧವಾರ, 13 ಜುಲೈ 2016 (15:01 IST)
ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವರ ಕೈವಾಡವಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಎ.ಎಸ್‌.ಪಾಟೀಲ್ ನಡಹಳ್ಳಿ ಹೇಳಿಕೆಯಿಂದ ವಿಧಾನಸಭೆ ರಣರಂಗವಾಗಿ ಪರಿಣಮಿಸಿತು.
 
ವಿಧಾನಸಭೆಯಲ್ಲಿ ಮಾತನಾಡಿದ ಎ.ಎಸ್‌.ಪಾಟೀಲ್ ನಡಹಳ್ಳಿ, ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವರ ಕೈವಾಡವಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಹೇಳಿದರು. ಈ ಸಮಯದಲ್ಲಿ ಪಕ್ಷಭೇದ ಮರೆತು ಕಾಂಗ್ರೆಸ್‌ನ ಕೆ.ಎನ್.ರಾಜನ್ ಸೇರಿದಂತೆ ಬಿಜೆಪಿ ಶಾಸಕ ಕಾರಜೋಳ, ಲಕ್ಷಣ ಸವದಿ ಮತ್ತು ಹಲವು ನಾಯಕರು ನಡಹಳ್ಳಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು.
 
ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣದಲ್ಲಿ ಕೈವಾಡವಿರುವ ಮಾಜಿ ಸಚಿವರ ಹೆಸರನ್ನು ಹೇಳಿ ಇಲ್ಲವಾದರೆ ಕಡತದಿಂದ ಹೇಳಿಕೆಯನ್ನು ತೆಗೆದು ಹಾಕಿ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ. ಈ ಸಮಯದಲ್ಲಿ ಮಧ್ಯ ಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರು ಹೆಸರು ಹೇಳಿಲ್ಲ ನೀವೆಕೆ ತಲೆ ಕೆಡಿಸಿಕೊಳ್ಳುತ್ತಿರಿ ಎಂದು ಹೇಳಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಸುರೇಶ್ ಕುಮಾರ್, ಹೆಸರು ಹೇಳದಿರುವುದೆ ಸಮಸ್ಯೆಯಾಗಿದೆ ಎಂದು ತಿರುಗೇಟು ನೀಡಿದರು. 
 
ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣದಲ್ಲಿ ಕೈವಾಡವಿರುವ ಮಾಜಿ ಸಚಿವರ ಹೆಸರನ್ನು ಹೇಳಿ ಇಲ್ಲವಾದರೆ ಕಡತದಿಂದ ಹೇಳಿಕೆಯನ್ನು ತೆಗೆದು ಹಾಕುತ್ತೇನೆ ಎಂದು ಎ.ಎಸ್‌.ಪಾಟೀಲ್ ನಡಹಳ್ಳಿ ಅವರಿಗೆ ಸ್ವೀಕರ್ ಕೆ.ಬಿ.ಕೋಳಿವಾಡ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments