ಮಾಡಿರೋದು ಅವ್ರು ನಮ್ಮವರನ್ನು ಎಳ್ಕೊಂಡೋಗ್ಯಾರೆ: ವಿಜಯೇಂದ್ರ ಮುಂದೆ ಮಹಿಳೆಯರ ಗೋಳು

Sampriya
ಗುರುವಾರ, 12 ಸೆಪ್ಟಂಬರ್ 2024 (19:01 IST)
Photo Courtesy X
ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್‌ ಅಶೋಕ್, ನಾಯಕರಾದ ಸಿಟಿ ರವಿ, ಅಶ್ವಥ್‌ನಾರಾಯಣ, ಸುನೀಲ್ ಕುಮಾರ್ ಸೇರಿದಂತೆ ಬಿಜೆಪಿ ನಾಯಕರು ಗಲಭೆಯಾದ ನಾಗಮಂಗಲಕ್ಕೆ ಭೇಟಿ ನೀಡಿ ವಿಚಾರಿಸಿದರು.

ಈ ವೇಳೆ ಘಟನೆಯಲ್ಲಿ ತಮ್ಮವರನ್ನು ಸುಖಾಸುಮ್ಮನೆ ಕರೆದುಕೊಂಡು ಹೋಗಿದ್ದಾರೆ. ಮಾಡಿದ್ದೆಲ್ಲ ಅವರು, ಎತ್ತಾಕಿಕೊಂಡು ಹೋಗಿದ್ದು ನಮ್ಮವರನ್ನು ಎಂದು ಮಹಿಳೆಯೊಬ್ಬರು ವಿಜಯೇಂದ್ರ ಬಳಿ ತಮ್ಮ ಅಳಲನ್ನು ತೋಡಿಕೊಂಡರು.

ಬೆಂಕಿ ಹಾಕಿದ್ದೆಲ್ಲ ಅವರು, ಮಾಡಿದ್ದೆಲ್ಲ ಅವರು. ಇದೀಗ ನಮ್ಮ ಹುಡುಗರನ್ನು ಎತ್ತಾಕಿಕೊಂಡು ಹೋಗಿದ್ದಾರೆ. ಈ ಸಂಬಂಧ ಎಸ್‌ಪಿ ಅವರ ಜತೆ ಮಾತನಾಡಿ ನ್ಯಾಯ ಒದಗಿಸುತ್ತೇನೆಂದು ವಿಜಯೇಂದ್ರ ಭರವಸೆ ನೀಡಿದರು.

ನಂತರ ಮಾಧ್ಯಮಗಳ ಜತೆ ಮಾತನಾಡಿದ ವಿಜಯೇಂದ್ರ ಅವರು, ಹಿಂದೂ ಯುವಕರು ಶಾಂತಿಯುತವಾಗಿ ಗಣಪತಿ ವಿಸರ್ಜನೆ ಮೆರವಣಿಗೆ ಮಾಡುತ್ತಿದ್ದರು. ಇದೆಲ್ಲ ಪೂರ್ವನಿಯೋಜಿತ ಕೃತ್ಯ. ದೇಶದ್ರೋಹಿಗಳು ಹಿಂದೂ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ನಡೆಸಿ, ತಲವಾರ್‌ನಿಂದ ಹಲ್ಲೆಗೆ ಮುಂದಾಗಿದ್ದಾರೆ.  ಅಂಗಡಿಗಳಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ. ಇಷ್ಟಾದ್ರೂ ಮಾತ್ರ ಪೊಲಿಸರು ಕೈ ಕಟ್ಟಿ ಕುಳಿತಿದ್ದಾರೆ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ  ನಡವಳಿಕೆಯಿಂದಾಗಿ ದೇಶದ್ರೋಹಿಗಳು ಇಂತಹ ಅಟ್ಟಹಾಸ ಮೆರೆಯುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ಮುಂದಿನ ಸುದ್ದಿ
Show comments