Webdunia - Bharat's app for daily news and videos

Install App

ಮಾಡಿರೋದು ಅವ್ರು ನಮ್ಮವರನ್ನು ಎಳ್ಕೊಂಡೋಗ್ಯಾರೆ: ವಿಜಯೇಂದ್ರ ಮುಂದೆ ಮಹಿಳೆಯರ ಗೋಳು

Sampriya
ಗುರುವಾರ, 12 ಸೆಪ್ಟಂಬರ್ 2024 (19:01 IST)
Photo Courtesy X
ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್‌ ಅಶೋಕ್, ನಾಯಕರಾದ ಸಿಟಿ ರವಿ, ಅಶ್ವಥ್‌ನಾರಾಯಣ, ಸುನೀಲ್ ಕುಮಾರ್ ಸೇರಿದಂತೆ ಬಿಜೆಪಿ ನಾಯಕರು ಗಲಭೆಯಾದ ನಾಗಮಂಗಲಕ್ಕೆ ಭೇಟಿ ನೀಡಿ ವಿಚಾರಿಸಿದರು.

ಈ ವೇಳೆ ಘಟನೆಯಲ್ಲಿ ತಮ್ಮವರನ್ನು ಸುಖಾಸುಮ್ಮನೆ ಕರೆದುಕೊಂಡು ಹೋಗಿದ್ದಾರೆ. ಮಾಡಿದ್ದೆಲ್ಲ ಅವರು, ಎತ್ತಾಕಿಕೊಂಡು ಹೋಗಿದ್ದು ನಮ್ಮವರನ್ನು ಎಂದು ಮಹಿಳೆಯೊಬ್ಬರು ವಿಜಯೇಂದ್ರ ಬಳಿ ತಮ್ಮ ಅಳಲನ್ನು ತೋಡಿಕೊಂಡರು.

ಬೆಂಕಿ ಹಾಕಿದ್ದೆಲ್ಲ ಅವರು, ಮಾಡಿದ್ದೆಲ್ಲ ಅವರು. ಇದೀಗ ನಮ್ಮ ಹುಡುಗರನ್ನು ಎತ್ತಾಕಿಕೊಂಡು ಹೋಗಿದ್ದಾರೆ. ಈ ಸಂಬಂಧ ಎಸ್‌ಪಿ ಅವರ ಜತೆ ಮಾತನಾಡಿ ನ್ಯಾಯ ಒದಗಿಸುತ್ತೇನೆಂದು ವಿಜಯೇಂದ್ರ ಭರವಸೆ ನೀಡಿದರು.

ನಂತರ ಮಾಧ್ಯಮಗಳ ಜತೆ ಮಾತನಾಡಿದ ವಿಜಯೇಂದ್ರ ಅವರು, ಹಿಂದೂ ಯುವಕರು ಶಾಂತಿಯುತವಾಗಿ ಗಣಪತಿ ವಿಸರ್ಜನೆ ಮೆರವಣಿಗೆ ಮಾಡುತ್ತಿದ್ದರು. ಇದೆಲ್ಲ ಪೂರ್ವನಿಯೋಜಿತ ಕೃತ್ಯ. ದೇಶದ್ರೋಹಿಗಳು ಹಿಂದೂ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ನಡೆಸಿ, ತಲವಾರ್‌ನಿಂದ ಹಲ್ಲೆಗೆ ಮುಂದಾಗಿದ್ದಾರೆ.  ಅಂಗಡಿಗಳಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ. ಇಷ್ಟಾದ್ರೂ ಮಾತ್ರ ಪೊಲಿಸರು ಕೈ ಕಟ್ಟಿ ಕುಳಿತಿದ್ದಾರೆ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ  ನಡವಳಿಕೆಯಿಂದಾಗಿ ದೇಶದ್ರೋಹಿಗಳು ಇಂತಹ ಅಟ್ಟಹಾಸ ಮೆರೆಯುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments