ನಾಗಮಂಗಲ ಗಲಭೆ ಪ್ರಕರಣ: ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ತಲೆದಂಡ

Sampriya
ಶುಕ್ರವಾರ, 13 ಸೆಪ್ಟಂಬರ್ 2024 (14:00 IST)
Photo Courtesy X
ಮಂಡ್ಯ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲ ಪಟ್ಟಣ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ನಾಗಮಂಗಲ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಗುರುವಾರ ರಾತ್ರಿ ಐಜಿಪಿ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು, ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಲಾಗಿದೆ.

ಘಟನೆಗೆ ಕಾರಣಗಳೇನು ಎಂಬುದರ ಕುರಿತು ವರದಿ ನೀಡುವಂತೆ ಈಗಾಗಲೇ ಸೂಚಿಸಿದ್ದೇನೆ‌. ವರದಿ ಬಂದ ನಂತರ ಕಾನೂನು ಚೌಕಟ್ಟಿನಲ್ಲಿ ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮ ಜರುಗಿಸುತ್ತೇವೆ. ಕಾನೂನಿಗಿಂತ ಯಾರು ದೊಡ್ಡವರಲ್ಲ ಎಂದು ಹೇಳಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 150 ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, 52 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಮುಂದಿನ ಸುದ್ದಿ
Show comments