Webdunia - Bharat's app for daily news and videos

Install App

ನಾಗಮಂಗಲ ಗಲಭೆ, ಬಂಧನ ಭೀತಿಯಲ್ಲಿದ್ದ ಯುವಕ ಸಾವು

Sampriya
ಶನಿವಾರ, 21 ಸೆಪ್ಟಂಬರ್ 2024 (22:29 IST)
ನಾಗಮಂಗಲ: ಇಲ್ಲಿ ನಡೆದ ಗಲಭೆ ಸಂಬಂಧ ಬಂಧನ ಭೀತಿಯಲ್ಲಿದ್ದ ಯುವಕ ಕಿರಣ್ ಮಿದುಳಿಗೆ ಪಾರ್ಶ್ವವಾಯು ಹೊಡೆದು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.

ಗಲಭೆ ಬಳಿಕ ಕಳೆದ ವಾರ ಕಿರಣ್ ಊರು ತೊರೆದಿದ್ದು, ಯುವಕನ ತಂದೆ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದು, ಕಾರಾಗೃಹದಲ್ಲಿದ್ದಾರೆ.  ತಂದೆ ಬಂಧನ ಸಂಬಂಧ ಕಿರಣ್ ತುಂಬಾನೇ ಆತಂಕಕ್ಕೆ ಒಳಗಾಗಿದ್ದ ಎಂದು ಕುಟುಂಬಸ್ಥರು ದೂರಿದ್ದಾರೆ.

ಕಿರಣ್‌ನನ್ನು ಗುರುವಾರ ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಶಸ್ತ್ರಚಿಕಿತ್ಸೆ ಕೂಡ ನಡೆದಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ತಂದೆ ತಾಯಿಗೆ ಒಬ್ಬನೇ ಮಗನಾಗಿದ್ದ ಕಿರಣ್‌ ಮೂರು ವರ್ಷಗಳ ಹಿಂದೆ ಯುವತಿಯೊಬ್ಬರನ್ನು ಪ್ರೀತಿಸಿ ವಿವಾಹವಾಗಿದ್ದ. ಕಿರಣ್‌ಗೆ ಎರಡು ವರ್ಷದ ಮಗು ಮತ್ತು ಪತ್ನಿ ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments