Select Your Language

Notifications

webdunia
webdunia
webdunia
webdunia

ಡಿಸೋಜಾ ಹೇಳಿಕೆಗೆ ತಿರುಗೇಟು ಕೊಟ್ಟ ನಳೀನ್ ಕುಮಾರ್ ಕಟೀಲು

ಡಿಸೋಜಾ ಹೇಳಿಕೆಗೆ ತಿರುಗೇಟು ಕೊಟ್ಟ ನಳೀನ್ ಕುಮಾರ್ ಕಟೀಲು
ಮಂಗಳೂರು , ಮಂಗಳವಾರ, 7 ಜನವರಿ 2020 (11:21 IST)
ಮಂಗಳೂರು :ಮಂಗಳೂರಿಗೆ ಅಮಿತ್ ಶಾ ಬಂದ್ರೆ ಧರಣಿ ಮಾಡುತ್ತೇವೆ ಎಂದ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ತಿರುಗೇಟು ನೀಡಿದ್ದಾರೆ.



ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಮೂಡಿಸಲು ಮಂಗಳೂರಿನಲ್ಲಿ ಜನವರಿ 19 ರಂದು  ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಈ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ ಎನ್ನಲಾಗಿದೆ. ಇದಕ್ಕೆ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ, ಅಮಿತ್ ಶಾ ಮಂಗಳೂರಿಗೆ  ಆಗಮಿಸಿದರೆ  ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ, ಉಪವಾಸ ಕೂರುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ನಳೀನ್ ಕುಮಾರ್ ಕಟೀಲು, ಡಿಸೋಜಾರಿಂದ ಜಿಲ್ಲೆಯಲ್ಲಿ ಶಾಂತಿ ಕದಡುತ್ತಿದೆ. ಹಾಗಾಗಿ ಅವರನ್ನು ಗಡಿಪಾರು ಮಾಡಬೇಕು. ಗಡಿಪಾರಿಗೆ ನಾವು ಸತ್ಯಾಗ್ರಹ ಮಾಡಬೇಕಾಗುತ್ತೆ ಎಂದು  ತಿರುಗೇಟು ನೀಡಿದ್ದಾರೆ. ಹಾಗೇ ಅಮಿತ್ ಶಾ ಮಂಗಳೂರಿಗೆ ಆಗಮಿಸುವುದರ ಬಗ್ಗೆ ಇನ್ನೂ ನಿಗದಿಯಾಗಿಲ್ಲ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಧ್ಯರಾತ್ರಿ ಅಮೆರಿಕಾ ಅಧ್ಯಕ್ಷರಿಗೆ ಕರೆ ಮಾಡಿದ ಪ್ರಧಾನಿ ಮೋದಿ ಹೇಳಿದ್ದೇನು ಗೊತ್ತಾ?!