Select Your Language

Notifications

webdunia
webdunia
webdunia
webdunia

ನಳಿನ್​​​​​​​, ಡಿವಿಎಸ್​ ಫೋಟೋಗೆ ಚಪ್ಪಲಿ ಹಾರ

ನಳಿನ್​​​​​​​, ಡಿವಿಎಸ್​ ಫೋಟೋಗೆ ಚಪ್ಪಲಿ ಹಾರ
ಪುತ್ತೂರು , ಸೋಮವಾರ, 15 ಮೇ 2023 (19:39 IST)
ಪುತ್ತೂರು ಮತ್ತು ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿರುವುದಕ್ಕೆ ಈ ಭಾಗದ ಹಿಂದೂ ಕಾರ್ಯಕರ್ತರು ಕೆರಳಿದ್ದಾರೆ. ಬಿಜೆಪಿ ಹೀನಾಯ ಸೋಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್ ಕಟೀಲ್​​​ ಹಾಗೂ ಡಿ.ವಿ ಸದಾನಂದ ಗೌಡ ಕಾರಣವೆಂದು ದೂರಲಾಗಿದೆ.. ಇವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಸ್ ನಿಲ್ದಾಣದ ‌ಬಳಿ ಬ್ಯಾನರ್​​ ಹಾಕಿ ಆಕ್ರೋಶ ಹೊರಹಾಕಿದ್ದಾರೆ. ನಳಿನ್ ಕುಮಾರ್​ ಕಟೀಲ್ ಮತ್ತು ಡಿ.ವಿ ಸದಾನಂದ ಗೌಡ ಬ್ಯಾನರ್ ಹಾಕಿ ಶ್ರದ್ಧಾಂಜಲಿ ಎಂದು ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ ಅಂತ ಬ್ಯಾನರ್ ಹಾಕಲಾಗಿದೆ. ನೊಂದ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಹಿಂದೂ ಮುಖಂಡ ಅರುಣ್ ಪುತ್ತಿಲ ಬಿಜೆಪಿ ವಿರುದ್ಧ ಬಂಡಾಯವೆದ್ದಿದ್ದು ಪಕ್ಷೇತರವಾಗಿ ಸ್ಪರ್ಧಿಸಿದ್ರು.. ಕಾಂಗ್ರೆಸ್ ವಿರುದ್ಧ ಸೆಣಸಾಡಿ 3 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಪುತ್ತೂರಿನಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ಜಾರಿದೆ. ಪುತ್ತೂರು ತಾಲೂಕಿನವರೇ ಆದ ನಳಿನ್ ಕುಮಾರ್​​ ಕಟೀಲ್ ಹಾಗೂ ಡಿ.ವಿ ಸದಾನಂದಗೌಡರು ಬಿಜೆಪಿ ಸೋಲಿಗೆ ಕಾರಣ ಎಂದು ಆಕ್ರೋಶ ಹೊರಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

C.T ರವಿ ಸೋಲಿಗೆ ಕುಮಾರಸ್ವಾಮಿ ಸಂಭ್ರಮ