Webdunia - Bharat's app for daily news and videos

Install App

ನಳಿನ್ ಕುಮಾರ್ ನಾಲಿಗೆ ಬಿಗಿ ಹಿಡಿದು ಮಾತಾಡಲಿ: ಖರ್ಗೆ ಖಡಕ್ ಎಚ್ಚರಿಕೆ

Webdunia
ಶುಕ್ರವಾರ, 17 ಮೇ 2019 (16:53 IST)
ರಾಜೀವ್ ಗಾಂಧಿ ಬಗ್ಗೆ ಸಂಸದ ನಳಿನ್ ಕುಮಾರ್ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕಲ್ಬುರ್ಗಿಯಲ್ಲಿ ಕಾಂಗ್ರೆಸ್ ಸಂಸದ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜೀವ್ ಗಾಂಧಿ ದೇಶದ ಐಕ್ಯತೆಗಾಗಿ ಪ್ರಾಣ ಕೊಟ್ಟ ನಾಯಕರಾಗಿದ್ದಾರೆ. ಇಂಥವರ ಬಗ್ಗೆ ಅವಹೇಳನಕಾರಿ ಹೇಳಿಕೆ ಸರಿಯಲ್ಲ. ಇಂತಹ ವಿಚಾರಧಾರೆ ಮನಸ್ಸಿನವರು ಹೆಚ್ಚಾಗುತ್ತಿರುವುದರಿಂದ ದೇಶ ದುಸ್ಥಿತಿಗೆ ಬಂದು ತಲುಪಿದೆ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನಾದರೂ ನಾಲಿಗೆ ಬಿಗಿ ಹಿಡಿದು ಮಾತನಾಡತಕ್ಕದ್ದು ಮಾಡಬೇಕು ಎಂದು ವಾರ್ನಿಂಗ್ ಮಾಡಿದ್ರು.
ಮಹಾತ್ಮ ಗಾಂಧಿಯವರು ಯಾರು? ಈ ದೇಶಕ್ಕೆ ಸ್ವಾತಂತ್ರ ತಂದುಕೊಟ್ಟವರು. ದೇಶಕ್ಕಾಗಿ ಪ್ರಾಣಬಿಟ್ಟ ಗಾಂಧಿಜಿಯವರನ್ನು ಗುಂಡಿಟ್ಟು ಕೊಂದ ಗೋಡ್ಸೆಯನ್ನು ದೇವರು ಎನ್ನುತ್ತಿದ್ದಾರೆ.

ಒಂದು ಕಡೆ ರಾಷ್ಟ್ರಪಿತ ಅಂತ ಗಾಂಧಿ ಅವರ ಸಮಾಧಿ ಮುಂದೆ ಮೋದಿ ತೆಲೆಬಾಗುತ್ತಾರೆ. ಇನ್ನೊಂದಡೆ ಇಂತಹ ಹೇಳಿಕೆ ಕೊಡ್ತಾರೆ. ಒಳಗೊಂದು ಹೊರಗೊಂದು ಇರುವ  ಜನರಿಂದಲೇ ದೇಶಕ್ಕೆ, ಸಮಾಜಕ್ಕೆ ತೊಂದರೆ ಇದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ದೂರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments