ನಾಲಪಡ್ ಗೆ ರೈತನ ಖಡಕ್ ಎಚ್ಚರಿಕೆ..!!!

Webdunia
ಭಾನುವಾರ, 25 ಸೆಪ್ಟಂಬರ್ 2022 (15:37 IST)
ಬಳ್ಳಾರಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮದಲ್ಲಿ ಯುವ ಕಾಂಗ್ರೆಸ್​ನಿಂದ ನಿನ್ನೆ (ಸೆ.24) ರಾತ್ರಿ ರೈತ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ನಲಪಾಡ್​ ಅವರು ರೈತರನ್ನು ಉದ್ದೇಶಿಸಿ ಮಾತನಾಡುತ್ತಾ ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್ ಕಮಿಷನ್​ ಆರೋಪ ಮಾಡಿದರು. ಈ ವೇಳೆ ರೈತನೊಬ್ಬ ಮಧ್ಯ ಪ್ರವೇಶಿಸಿ, ವಿರೋಧಿಸಲು ಮುಂದಾದಾಗ, ಆತನಿಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಏಕವಚನದಲ್ಲಿ ಮಾತನಾಡಿ ಎಡವಟ್ಟು ಮಾಡಿಕೊಂಡಿದ್ದಾರೆ.
 
ವಿವರಣೆಗೆ ಬರುವುದಾದರೆ, ಬಿಜೆಪಿ ಸರ್ಕಾರ 40 ಪರ್ಸೆಂಟ್​ ಕಮಿಷನ್​ ಪಡೆಯುತ್ತಿದೆ ಎಂದು ನಾವು ಹೇಳಿದ್ದಲ್ಲ. ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರೇ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. ಅಲ್ಲದೆ, ಅವರದೇ ಪಕ್ಷದ ಕಾರ್ಯಕರ್ತ ಸಂತೋಷ್​ ಪಾಟೀಲ್​ ಅವರ ಜೀವ ಹೋಗಿದ್ದು ಕೂಡ ಇವರ 40 ಪರ್ಸೆಂಟ್​ ಕಮಿಷನ್​ನಿಂದ ಎಂದು ನಲಪಾಡ್​ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಸರ್ಕಾರದ ವಿರುದ್ಧ ಆರೋಪ ಮಾಡುವಾಗ ವೇದಿಕೆ ಪಕ್ಕದಲ್ಲಿದ್ದ ರೈತನೊಬ್ಬ ಆಕ್ಷೇಪ ವ್ಯಕ್ತಪಡಿಸುತ್ತಾರೆ. ಇದರಿಂದ ಸಿಟ್ಟಿಗೆದ್ದ ನಲಪಾಡ್​, ಯಾವನೋ ಅವನು ಕುಡಿದು ಬಿಟ್ಟು ಹೇಳುವುದನ್ನು ಕೇಳಿ ನೀವು ಟೆನ್ಸನ್​ ತೆಗೆದುಕೊಳ್ಳಬೇಡಿ. ನಾನು ಹೇಳುವುದನ್ನು ಕೇಳಿ ಎಂದು ನಲಪಾಡ್ ಹೇಳುತ್ತಾರೆ.
 
ನಲಪಾಡ್ ಮಾತಿಗೆ ರೊಚ್ಚಿಗೆದ್ದ ಸಂವಾದದಲ್ಲಿ ಭಾಗಿಯಾಗಿದ್ದ ರೈತ, ಯಾವನೋ-ಗೀವನೋ ಅಂದ್ರೆ ಸರಿಯಿರಲ್ಲ ಎಂದು ಅವಾಜ್ ಹಾಕಿದರು. ಅಲ್ಲಿದ್ದ ಇತರೆ ರೈತರು ಎಷ್ಟೇ ಸಮಾಧಾನ ಪಡಿಸಿದರೂ ರೈತ ಸುಮ್ಮನಾಗದಿದ್ದಾಗ ಪೊಲೀಸರು ಮಧ್ಯ ಪ್ರವೇಶಿಸಿ, ರೈತನ ಸಮಾಧಾನ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments