Webdunia - Bharat's app for daily news and videos

Install App

ನಡು ರಸ್ತೆಯಲ್ಲಿ ನಮಾಜ್, ಮಂಗಳೂರಿನಲ್ಲಿ ವಿವಾದ

Krishnaveni K
ಸೋಮವಾರ, 27 ಮೇ 2024 (12:47 IST)
ಮಂಗಳೂರು: ಸಾರ್ವಜನಿಕರು ಓಡಾಡುವ ನಡು ರಸ್ತೆಯಲ್ಲಿ ನಮಾಜ್ ಮಾಡಿರುವ ವಿಚಾರ ಈಗ ಮಂಗಳೂರಿನ ಕಂಕನಾಡಿಯಲ್ಲಿ ವಿವಾದಕ್ಕೀಡಾಗಿದೆ.

ಇದರಿಂದಾಗಿ ರಸ್ತೆಯಲ್ಲಿ ಓಡಾಡುವವರು ತೊಂದರೆ ಅನುಭವಿಸಬೇಕಾಗಿ ಬಂದಿದೆ. ಇದರ ಬಗ್ಗೆ ಸ್ಥಳೀಯರಿಂದ ಆಕ್ಷೇಪ ವ್ಯಕ್ತವಾಗಿದೆ. ಕಳೆದ ಶುಕ್ರವಾರ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ದೃಶ್ಯಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕೆಲವು ದಿನಗಳ ಮೊದಲು ಬೆಂಗಳೂರಿನಲ್ಲೂ ಇಂತಹದ್ದೇ ಘಟನೆ ನಡೆದಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ಕೂಡಾ ನೀಡಲಾಗಿತ್ತು. ಇದೀಗ ಕಂಕನಾಡಿ ಮಸೀದಿ ಮುಂದಿನ ರಸ್ತೆಯಲ್ಲಿ ಅಂತಹದ್ದೇ ಘಟನೆ ನಡೆದಿದೆ.

ಇದರಿಂದಾಗಿ ಈ ರಸ್ತೆಯಲ್ಲಿ ಓಡಾಡಬೇಕಾಗಿದ್ದ ವಾಹನ ಸವಾರರು ಬದಲಿ ಮಾರ್ಗದಲ್ಲಿ ಸಂಚರಿಸಬೇಕಾಗಿ ಬಂದಿದೆ. ಪ್ರಾರ್ಥನೆ ಏನಿದ್ದರೂ ಸಾರ್ವಜನಿಕರು ಓಡಾಡುವ ಜಾಗದಲ್ಲೇ ಸಾರ್ವಜಜನಿಕರಿಗೆ ತೊಂದರೆ ನೀಡುವಂತೆ ಮಾಡುವ ಅಗತ್ಯವೇನಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲವು ಸಮಯದ ಹಿಂದೆ ದೆಹಲಿಯಲ್ಲಿ ಇದೇ ರೀತಿ ರಸ್ತೆಯಲ್ಲಿ ನಮಾಜ್ ಮಾಡಿದವರ ಮೇಲೆ ಪೊಲೀಸರು ಬೂಟು ಕಾಲಿನಿಂದ ಒದ್ದ ಪ್ರಕರಣ ವಿವಾದಕ್ಕೆ ಕಾರಣವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments